ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಕೇಂದ್ರ ಸಾರಿಗೆ ಸಚಿವ ನಿತೀನ್ ಗಡ್ಕರಿ ಜ.5ರಂದು ಬೆಂಗಳೂರು-ಮೈಸೂರು ಹೆದ್ದಾರಿಯ ಪರಿಶೀಲನೆ ನಡೆಸಲಿದ್ದು, ಆನಂತರ, ಸಂಜೆ ಮುಖ್ಯಮಂತ್ರಿ ಜೊತೆ ಅವರು ಸಭೆ ನಡೆಸಿ ಹಲವಾರು ವಿಚಾರಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ.
ಉದ್ಘಾಟನೆಗೆ ಸಿದ್ಧವಾಗಿರುವ ಈ ಹೆದ್ದಾರಿಯ ಕಾಮಗಾರಿ ಅವೈಜ್ಞಾನಿಕವಾಗಿದೆ ಎಂದು ಸಂಸದೆ ಸುಮಲತಾ ಅಂಬರೀಶ್ ಸೇರಿದಂತೆ ಅನೇಕ ಜನಪ್ರತಿನಿಧಿಗಳು ನಿತಿನ್ ಗಡ್ಕರಿಗೆ ದೂರು ಸಲ್ಲಿಸಿ, ಹೆದ್ದಾರಿಯ ನಿರ್ಮಾಣ ಕಾರ್ಯದ ವೈಜ್ಞಾನಿಕ ಪರಿಶೀಲನೆ ನಡೆಸುವಂತೆ ಮನವಿ ಮಾಡಿದ್ದರು.
ಹೆದ್ದಾರಿಯ ಪರಿಶೀಲನೆ ವೇಳೆ ನಿತೀನ್ ಗಡ್ಕರಿ ಜೊತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಮನಗರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಸಿ.ಎನ್.ಅಶ್ವತ್ಥ ನಾರಾಯಣ, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್, ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ, ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಮತ್ತಿತರರು ಉಪಸ್ಥಿತರಿರಲಿರುವರು.