ರಸ್ತೆಯಲ್ಲಿ ಬಿದ್ದಿದ್ದ ಮರಕ್ಕೆ ಬೈಕ್ ಡಿಕ್ಕಿಯಾಗಿ ಸವಾರ ಸಾವು

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ರಸ್ತೆಯ ಮೇಲೆ ಬಿದ್ದಿದ್ದ ಮರಕ್ಕೆ ಬೈಕ್ ಡಿಕ್ಕಿಯಾಗಿ ಸವಾರ ಮೃತಪಟ್ಟ ಘಟನೆ ಬುಧವಾರ ಧರ್ಮಸ್ಥಳ‌ ಸನಿಹ ನಡೆದಿದೆ.
ಘಟನೆಯಲ್ಲಿ ಓಡಿಲ್ನಾಲ ಮುಗುಳಿಚತ್ರ ನಿವಾಸಿ ವಸಂತ್ ಕುಮಾರ್ ಜೈನ್ (42) ಸ್ಥಳದಲ್ಲೆ ಸಾವನ್ನಪ್ಪಿದ್ದಾರೆ.
ಇವರು ಧರ್ಮಸ್ಥಳದ ನೇತ್ರಾವತಿ ಸ್ನಾನಘಟ್ಟ ಸಮೀಪ ಹೋಟೆಲ್ ನಡೆಸುತ್ತಿದ್ದು , ಧರ್ಮಸ್ಥಳದಲ್ಲಿ ವಾಸವಾಗಿದ್ದರು.
ಧರ್ಮಸ್ಥಳ ಕಡೆಯಿಂದ ಸ್ನಾನಘಟ್ಟ ಬರುವ ಮಾರ್ಗ ಮಧ್ಯ ರಸ್ತೆಗೆ ಬಿದ್ದ ಮರವನ್ನು ಗಮನಿಸಿದೆ ಬೈಕ್ ಡಿಕ್ಕಿಯಾಗಿದೆ.
ತಕ್ಷಣ ರಸ್ತೆಗೆ ಎಸೆಯಲ್ಪಟ್ಟ ಅವರು, ತಲೆಗೆ ಗಂಭೀರ ಗಾಯಗೊಂಡು ಸ್ಥಳದಲ್ಲೆ ಮೃತಪಟ್ಟಿದ್ದಾರೆ.
ತಕ್ಷಣ ಸ್ಥಳಕ್ಕೆ ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆ ಉಪನಿರೀಕ್ಷಕ ಓಡಿಯಪ್ಪ ಗೌಡ ಸಹಿತ ಪೊಲೀಸ್ ಸಿಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!