Thursday, March 23, 2023

Latest Posts

ಕಾರ್ಖಾನೆಯೊಂದರಲ್ಲಿ ಸ್ಪೋಟ, ವ್ಯಕ್ತಿ ಸಾವು: ವಿವಿಧ ಆಯಾಮಗಳಲ್ಲಿ ಪೊಲೀಸರಿಂದ ತನಿಖೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ನಲ್ಗೊಂಡ ಜಿಲ್ಲೆಯ ನರ್ಕಟ್‌ಪಲ್ಲಿ ಮಂಡಲದ ಗೋಪಾಲಯಪಲ್ಲಿಯಲ್ಲಿ ಸ್ಫೋಟ ಸಂಭವಿಸಿದೆ. ಗಣೇಶ್ ಆನಂದ್ ಸ್ಫೋಟಕ ಕಂಪನಿಯಲ್ಲಿ ಡ್ರಿಲ್ಲಿಂಗ್ ಮಾಡುತ್ತಿದ್ದಾಗ ಇದ್ದಕ್ಕಿದ್ದಂತೆ ಸ್ಫೋಟ ಸಂಭವಿಸಿದೆ. ಈ ಅಪಘಾತದಲ್ಲಿ ಒಬ್ಬರು ಸಾವನ್ನಪ್ಪಿದ್ದು, ಮಾಹಿತಿ ಪಡೆದ ತಕ್ಷಣ ಪೊಲೀಸರು ಸ್ಥಳಕ್ಕೆ ಆಗಮಿಸಿದರು.

ಅಪಘಾತ ಸ್ಥಳವನ್ನು ಪರಿಶೀಲಿಸಿ ಮೃತದೇಹವನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ಘಟನೆ ಕುರಿತು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಲಾಗುತ್ತಿದೆ. ಅಪಘಾತ ಹೇಗೆ ಸಂಭವಿಸಿತು? ಯಾವುದರಿಂದ ಉಂಟಾಗಿದೆ? ಕೆಮಿಕಲ್‌ ಅವಘಡವೇ ಮತ್ತೇನಾದರೂ ಕಾರಣವಿದೆಯೇ ಈ ಎಲ್ಲಾ ಕೋನಗಳಲ್ಲಿ ತನಿಖೆ ಕೈಗೆತ್ತಿಕೊಂಡಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!