ಹಣದ ವಿಚಾರಕ್ಕೆ ವ್ಯಕ್ತಿಯ ಬರ್ಬರ ಹತ್ಯೆ: ಆರೋಪಿ ಬಂಧನ

ಹೊಸದಿಗಂತ ವರದಿ, ಹುಬ್ಬಳ್ಳಿ:

ಹಣದ ವಿಚಾರಕ್ಕೆ ವ್ಯಕ್ತಿಯೋರ್ವನನ್ನು ಕೊಲೆ ಮಾಡಿದ ಘಟನೆ ಇಲ್ಲಿಯ ಅರವಿಂದ ನಗರದ ಪಿ.ಎನ್.ಟಿ ಕ್ವಾಟರ್ಸ್ ಹಿಂಬದಿಯ ರಸ್ತೆಯಲ್ಲಿ ನಡೆದಿದೆ.
ತೊರವಿ ಹಕ್ಕಲದ ನಿವಾಸಿ ಅಕ್ಬರ್ ಅಲ್ಲಾಭಕ್ಷಾ ಮುಲ್ಲಾ (41) ಎಂಬಾತ ಹತ್ಯೆಗೊಳಾಗದ ವ್ಯಕ್ತಿ.
ಗುರುವಾರ ತಡ ರಾತ್ರಿ ಸ್ನೇಹಿತರೊಂದಿಗೆ ಮನೆಗೆ ಹೋಗುವ ವೇಳೆ ಅಡ್ಡಗಟ್ಟಿದ ದುಷ್ಕರ್ಮಿಗಳು ಮಚ್ಚಿನಿಂದ‌ ಕೊಚ್ಚಿ ಕೊಲೆ ಮಾಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಹಳೆ ಹುಬ್ಬಳ್ಳಿ ಪೊಲೀಸರು ಪರಿಶೀಲನೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ಹಳೆ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!