ಹೊಸದಿಗಂತ ಡಿಜಿಟಲ್ ಡೆಸ್ಕ್:
ಜ್ಞಾನವಾಪಿ ಮಸೀದಿಯ (Gyanvapi mosque) ವೈಜ್ಞಾನಿಕ ಅಧ್ಯಯನ ಮತ್ತು ಸಮೀಕ್ಷೆಯ ವರದಿಯನ್ನು ಸಲ್ಲಿಸಲು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಗೆ (ASI) ಇನ್ನೂ ಒಂದು ವಾರ ಕಾಲಾವಕಾಶ ನೀಡಲಾಗಿದೆ.
ವರದಿಯನ್ನು ಡಿಸೆಂಬರ್ 18 ರಂದು ಸಲ್ಲಿಸುವಂತೆ ವಾರಣಾಸಿ (Varanasi) ಜಿಲ್ಲಾ ನ್ಯಾಯಾಧೀಶ ಅಜಯ್ ಕೃಷ್ಣ ವಿಶ್ವೇಶ ಸೋಮವಾರ ಸೂಚಿಸಿದ್ದಾರೆ
ಸೋಮವಾರ ಬೆಳಿಗ್ಗೆ, ಸ್ಥಾಯಿ ಸರ್ಕಾರಿ ವಕೀಲ (ಭಾರತ ಸರ್ಕಾರ) ಅಮಿತ್ ಶ್ರೀವಾಸ್ತವ ಅವರು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದು, ಅವರ ಆರೋಗ್ಯ ಸ್ಥಿತಿ ಹದಗೆಟ್ಟಿದ್ದರಿಂದ ವರದಿಯನ್ನು ಸಲ್ಲಿಸಬೇಕಿದ್ದ ಎಎಸ್ಐ ಅಧೀಕ್ಷಕ ಪುರಾತತ್ವಶಾಸ್ತ್ರಜ್ಞ ಅವಿನಾಶ್ ಮೊಹಾಂತಿ ಅವರು ನ್ಯಾಯಾಲಯಕ್ಕೆ ಹಾಜರಾಗಲು ಸಾಧ್ಯವಾಗಲಿಲ್ಲ ಎಂದು ಉಲ್ಲೇಖಿಸಿದ್ದಾರೆ. ಈ ಅರ್ಜಿಯ ಮೂಲಕ ಎಎಸ್ಐ ವರದಿ ಸಲ್ಲಿಸಲು ಒಂದು ವಾರ ಕಾಲಾವಕಾಶ ಕೋರಿದೆ ಎಂದು ಅವರು ತಿಳಿಸಿದ್ದಾರೆ.
ಡಿಸೆಂಬರ್ 18 ರಂದು ವರದಿಯನ್ನು ಸಲ್ಲಿಸಲು ಎಎಸ್ಐಗೆ ನ್ಯಾಯಾಲಯ ಒಂದು ವಾರ ಕಾಲಾವಕಾಶ ನೀಡಿದೆ ಎಂದು ಶ್ರೀವಾಸ್ತವ ಹೇಳಿದರು.