ಹೊಸದಿಗಂತ ಡಿಜಿಟಲ್ ಡೆಸ್ಕ್
ಶಿಕ್ಷಣ ವ್ಯವಸ್ಥೆಯಲ್ಲಿ ನೈತಿಕ ಅಂಶಗಳನ್ನು ಅಳವಡಿಸಲು ಸರ್ಕಾರ ಪ್ರಯತ್ನ ನಡೆಸುತ್ತಿದೆ ಹೀಗಾಗಿ ಪ್ರಸಕ್ತ ವರ್ಷ ಒಂದು ಪಠ್ಯವಾಗಿ ನೈತಿಕ ಶಿಕ್ಷಣವನ್ನು ಜಾರಿಗೊಳಿಸುತ್ತೇವೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ.
ಚಾಮರಾಜಪೇಟೆಯ ಉದಯ ಭಾನು ಪಬ್ಲಿಕ್ ಶಾಲೆಯ ಆಟದ ಮೈದಾನಲ್ಲಿ ಆಚಾರ್ಯ ನರರತ್ನ ಸುರಿಜಿ ಮಹಾರಾಜ್ ಅವರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ದಕ್ಷಿಣ ಭಾರತದಲ್ಲೇ ಅತ್ಯಂತ ದೊಡ್ಡದಾದ ಒಂದೇ ಬಾರಿಗೆ 11 ಮಂದಿ ಬಾಲಕರು ಮತ್ತು ಬಾಲಕಿಯರಿಗೆ ಸನ್ಯಾಸ ಧೀಕ್ಷೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ಶಿಕ್ಷಣದಲ್ಲಿ ಸಮಗ್ರ ಬದಲಾವಣೆ ತರುತ್ತಿದ್ದು, ರಾಷ್ಟ್ರೀಯವಾದಿ ಸಮಾಜ ನಿರ್ಮಿಸಲು ಪ್ರತಿಯೊಬ್ಬರಿಗೂ ದೇಶ ಪ್ರೇಮ ಮೂಡಿಸುವ ಶಿಕ್ಷಣದ ಅಗತ್ಯವಾಗಿದೆ. ನಾವು ಬ್ರಿಟಿಷ್ ಮಾದರಿಯ ಶಿಕ್ಷಣ ವ್ಯವಸ್ಥೆಯಿಂದ ಇನ್ನೂ ಮುಕ್ತವಾಗಿಲ್ಲ. ಹೀಗಾಗಿ ಒಂದು ಅಥವಾ ಎರಡನೇ ತರಗತಿಯಲ್ಲಿ ನೈತಿಕ ಶಿಕ್ಷಣದ ಪಾಠಗಳನ್ನು ಅಳವಡಿಸುತ್ತೇವೆ. ಹೀಗಾಗಿ ರಾಷ್ಟ್ರೀಯ ವಾದಿ ಶಿಕ್ಷಣ ವ್ಯವಸ್ಥೆಯನ್ನು ಅಳವಡಿಸಲು ತೀರ್ಮಾನಿಸಿದ್ದೇವೆ ಎಂದು ಹೇಳಿದರು.
ನಮಗೆ ದೇಶದಲ್ಲಿ ಔಪಚಾರಿಕ ಶಿಕ್ಷಣ ಬಹಳಷ್ಟು ಕಡೆಗಳಲ್ಲಿ ಸಿಗುತ್ತದೆ. ತಾಯಿ, ನಂತರ ಗುರುಗಳಿಂದಲೂ ಶಿಕ್ಷಣ ದೊರೆಯುತ್ತಿದೆ. ಆದರೆ ನೈತಿಕ ಶಿಕ್ಷಣ ಮತ್ತು ರಾಷ್ಟ್ರೀಯವಾದಿ ಶಿಕ್ಷಣ ದೊರೆಯುವುದಿಲ್ಲ ಎಂದರು.