ಸಿದ್ದರಾಮಯ್ಯ ಅಪರಾಧ ಸಾಬೀತಿಗೆ ಇನ್ನೊಂದೇ ಹೆಜ್ಜೆ ಬಾಕಿ ಇದೆ: ಎಚ್‌ಡಿಕೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಸಿಬಿಐ ರಾಜ್ಯ ಪ್ರವೇಶಕ್ಕೆ ರಾಜ್ಯ ಸರ್ಕಾರದಿಂದ ನಿರ್ಬಂಧ ಮಾಡಿರೋ ವಿಚಾರಕ್ಕೆ ಸರ್ಕಾರದ ನಡೆಗೆ ಕೇಂದ್ರ ಸಚಿವ ಕುಮಾರಸ್ವಾಮಿ ಕಿಡಿಕಾರಿದ್ದಾರೆ. ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಾಕಿ ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಶ್ರೀಮಾನ್ ಸಿದ್ದರಾಮಯ್ಯನವರೇ ನಿಮ್ಮ ಸಿದ್ವಿಲಾಸಕ್ಕೆ ಉಘೇಉಘೇ ಎನ್ನಲೇಬೇಕು. ಅಂದು ಹಗರಣಗಳಿಂದ ಪಾರಾಗಲು ಲೋಕಾಯುಕ್ತಕ್ಕೇ ಸಮಾಧಿ ಕಟ್ಟಿ ಎಸಿಬಿ ರಚನೆ ಮಾಡಿಕೊಂಡಿರಿ. ಇಂದು ಮುಡಾ ಹಗರಣದಿಂದ ಬಚಾವಾಗಲು ನಿಮಗೀಗ ಅದೇ ಲೋಕಾಯುಕ್ತವೇ ಗತಿ. Karma hit back ಎಂದರೇ ಇದೇ ಅಲ್ಲವೇ ಸಿದ್ದರಾಮಯ್ಯನವರೇ? ಎಂದು ಕಿಡಿಕಾರಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!