ಹೊಸದಿಗಂತ ಡಿಜಿಟಲ್ ಡೆಸ್ಕ್:
ಲಾರಿ ಚಾಲಕನೊಬ್ಬ ಒನ್ ವೇನಲ್ಲಿ ಬಂದ ಪರಿಣಾಮ ಬೈಕ್ ಗೆ ಡಿಕ್ಕಿ ಹೊಡೆದು ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕಡೂರು ತಾಲೂಕಿನ ತಂಗಲಿ ಬಳಿ ನಡೆದಿದೆ. ಮಹಿಳೆಯ ಪತಿ ದಾವಣಗೆರೆ ಎಎಸ್ಪಿ ಗನ್ಮ್ಯಾನ್ ಜಯಣ್ಣ ಅವರ ಸ್ಥಿತಿ ಗಂಭೀರವಾಗಿದೆ.
ಸುಮಾ (25) ಘಟನೆಯಲ್ಲಿ ಮೃತಪಟ್ಟವರು. ಕಡೂರು ತಾಲೂಕಿನ ತಂಗಲಿ ಮೂಲದ ಜಯಣ್ಣ ಎಂಬುವರು ತಮ್ಮ ಪತ್ನಿಯೊಂದಿಗೆ ಬೈಕ್ನಲ್ಲಿ ಹೋಗುತ್ತಿದ್ದಾಗ ಅಪಘಾತ ಸಂಭವಿಸಿದೆ. ಕೆಲಸದ ನಿಮಿತ್ತ ದಾವಣಗೆರೆಗೆ ತೆರಳಲೆಂದು ಪತ್ನಿಯೊಂದಿಗೆ ರೈಲ್ವೇ ನಿಲ್ದಾಣಕ್ಕೆ ತೆರಳುತ್ತಿದ್ದರು ಎಂದು ತಿಳಿದುಬಂದಿದೆ.
ಗಂಭೀರವಾಗಿ ಗಾಯಗೊಂಡ ಜಯಣ್ಣ ಅವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಒನ್ ವೇನಲ್ಲಿ ಬರುತ್ತಿದ್ದ ಲಾರಿ ಚಾಲಕನ ತಪ್ಪಿನಿಂದ ಈ ಅವಘಡ ಸಂಭವಿಸಿದೆ ಎನ್ನಲಾಗಿದೆ. ಲಾರಿ ಚಾಲಕನ ವಿರುದ್ಧ ಕ್ರಮ ಕೈಗೊಳ್ಳುವಂತೆ ನಿವಾಸಿಗಳು ಒತ್ತಾಯಿಸಿದ್ದಾರೆ.