ನನ್ನ ರಾಜಕೀಯ ಅಂತ್ಯದ ಬಗ್ಗೆ ತೀರ್ಮಾನ ಮಾಡೋ ಹಕ್ಕಿರೋದು ಜನರಿಗೆ ಮಾತ್ರ: ಡಿಕೆಶಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಚನ್ನಪಟ್ಟಣ ಕ್ಷೇತ್ರದಿಂದ ಡಿ‌.ಕೆ. ಶಿವಕುಮಾರ್ ಸ್ಪರ್ಧೆ ಮಾಡಿದರೆ ರಾಜಕೀಯ ಅಂತ್ಯ ಎನ್ನುವ ಸಿ.ಪಿ. ಯೋಗೇಶ್ವರ್ ಹೇಳಿಕೆಗೆ ಡಿಸಿಎಂ ಡಿ.ಕೆ.ಶಿವಕುಮಾರ್ ನನ್ನ ರಾಜಕೀಯ ಅಂತ್ಯ ತೀರ್ಮಾನ ಮಾಡುವುದು ಜನರು. ಅವರು ನೋಡಿಕೊಳ್ಳುತ್ತಾರೆ ಎಂದು ತಿರುಗೇಟು ನೀಡಿದ್ದಾರೆ.

10ನೇ ಅಂತಾರಾಷ್ಟ್ರೀಯ ಯೋಗದಿನಾಚರಣೆ ನಿಮಿತ್ತ ಇಂದು ವಿಧಾನಸೌಧದ ಮುಂಭಾಗದಲ್ಲಿ ನಡೆದ ಯೋಗೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ದೊಡ್ಡವರಿಗೆಲ್ಲ ನಾನು ಮಾತನಾಡಲು ಹೋಗಲ್ಲ, ನನಗೆ ಸಮಯವಿಲ್ಲ ಎಂದಿದ್ದಾರೆ.

ನನಗೆ ಶಕ್ತಿ ಕೊಡಿ ಅಂತ ನಾನು ಮತದಾರರಿಗೆ ಕೇಳಿಕೊಂಡಿದ್ದೇನೆ. ನನ್ನ ಹಿಂದೆ‌ ಒಂದು ಶಕ್ತಿ‌ ಇದೆ. ಜನ ಇದ್ದಾರೆ. ಅವರು ನೋಡಿಕೊಳ್ಳುತ್ತಾರೆ. ನನ್ನ ಅಂತ್ಯ ಬರೆಯುವವರು ಜನರು. ವಿಶ್ವಾಸ ಇದ್ದರೆ ಮತ ಹಾಕುತ್ತಾರೆ ಎಂದು ಹೇಳಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!