Sunday, January 11, 2026

ಉಧಂಪುರದಲ್ಲಿ ಉಗ್ರರ ವಿರುದ್ಧದ ಕಾರ್ಯಾಚರಣೆ: ವಿಶೇಷ ಪಡೆಯ ಪೊಲೀಸ್‌ ಸಿಬ್ಬಂದಿ ಹುತಾತ್ಮ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಜಮ್ಮು ಮತ್ತು ಕಾಶ್ಮೀರದ ಭದ್ರತಾ ಪರಿಸ್ಥಿತಿ ಮತ್ತೆ ಉದ್ವಿಗ್ನಗೊಂಡಿರುವ ನಡುವೆ, ಉಧಂಪುರ ಜಿಲ್ಲೆಯಲ್ಲಿ ನಡೆದ ಉಗ್ರರ ವಿರುದ್ಧದ ಕಾರ್ಯಾಚರಣೆಯಲ್ಲಿ ಭಯೋತ್ಪಾದಕರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸರ ವಿಶೇಷ ಕಾರ್ಯಾಚರಣೆ ಗುಂಪಿನ (ಎಸ್‌ಒಜಿ) ಸಿಬ್ಬಂದಿಯೊಬ್ಬರು ಪ್ರಾಣ ತ್ಯಾಗ ಮಾಡಿದ್ದಾರೆ.

ಹುತಾತ್ಮರಾದ ಪೊಲೀಸ್ ಸಿಬ್ಬಂದಿಯನ್ನು ಪೂಂಚ್ ಜಿಲ್ಲೆಯ ಮೆಂಧರ್ ನಿವಾಸಿ ಅಮ್ಜದ್ ಪಠಾಣ್ ಎಂದು ಗುರುತಿಸಲಾಗಿದೆ.

ಸೋಮವಾರ ಉಧಂಪುರದ ಮಜಲ್ಟಾ ಪ್ರದೇಶದ ಸೋಹನ್ ಗ್ರಾಮದ ಸಮೀಪದ ಅರಣ್ಯ ಪ್ರದೇಶದಲ್ಲಿ ಮೂವರು ಭಯೋತ್ಪಾದಕರು ಅಡಗಿಕೊಂಡಿರುವ ಬಗ್ಗೆ ಭದ್ರತಾ ಪಡೆಗಳಿಗೆ ನಿಖರ ಗುಪ್ತಚರ ಮಾಹಿತಿ ಲಭಿಸಿತ್ತು. ಈ ಮಾಹಿತಿಯ ಆಧಾರದಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು, ಭಾರತೀಯ ಸೇನೆ ಹಾಗೂ ಸಿಆರ್‌ಪಿಎಫ್ ಸಂಯುಕ್ತವಾಗಿ ಕಾರ್ಯಾಚರಣೆ ಆರಂಭಿಸಿವೆ.

ಕಾರ್ಯಾಚರಣೆ ವೇಳೆ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದು, ತೀವ್ರ ಗುಂಡಿನ ಚಕಮಕಿ ನಡೆಯಿತು. ಈ ವೇಳೆ ಎಸ್‌ಒಜಿ ಸಿಬ್ಬಂದಿ ಅಮ್ಜದ್ ಪಠಾಣ್ ಗಂಭೀರವಾಗಿ ಗಾಯಗೊಂಡು, ನಂತರ ಹುತಾತ್ಮರಾದರು. ಭಾರತೀಯ ಸೇನೆಯ ವೈಟ್ ನೈಟ್ ಕಾರ್ಪ್ಸ್ ಈ ಕಾರ್ಯಾಚರಣೆ ಇನ್ನೂ ಮುಂದುವರಿದಿದೆ ಎಂದು ತಿಳಿದುಬಂದಿದೆ.

error: Content is protected !!