‘ಆಪರೇಷನ್‌ ಅಜಯ್‌’ ಕಾರ್ಯಾಚರಣೆ: ಇಸ್ರೇಲ್‌ನಿಂದ 286 ಮಂದಿ ಭಾರತೀಯರು ಶೀಘ್ರವೇ ವಾಪಸ್!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಇಸ್ರೇಲ್‌ ನಿಂದ ಭಾರತೀಯರನ್ನು ಕರೆತರುವ ಕೇಂದ್ರ ಸರಕಾರದ ‘ಆಪರೇಷನ್‌ ಅಜಯ್‌’ ಕಾರ್ಯಾಚರಣೆ ಮುಂದುವರಿದಿದ್ದು, 286 ಮಂದಿ ಭಾರತೀಯರನ್ನು ಶೀಘ್ರವೇ ಭಾರತಕ್ಕೆ ಕರೆತರಲಾಗುವುದು ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್.ಜೈಶಂಕರ್ ತಿಳಿಸಿದ್ದಾರೆ.

ಈ ಕುರಿತು ಸಾಮಾಜಿಕ ಮಾಧ್ಯಮ ‘ಎಕ್ಸ್‌’ನಲ್ಲಿ ಪೋಸ್ಟ್ ಮಾಡಿರುವ ಅವರು, ‘ಆಪರೇಷನ್‌ ಅಜಯ್ ಕಾರ್ಯಾಚರಣೆ ಮುಂದುವರಿದಿದೆ.ಇನ್ನೂ 286 ಪ್ರಯಾಣಿಕರು ಭಾರತಕ್ಕೆ ಹಿಂತಿರುಗುತ್ತಿದ್ದಾರೆ. ಜತೆಗೆ 18 ಮಂದಿ ನೇಪಾಳದ ನಾಗರಿಕರು ಇದ್ದಾರೆ’ ಎಂದು ತಿಳಿಸಿದ್ದಾರೆ.

ಸ್ವದೇಶಕ್ಕೆ ಮರಳಲು ಬಯಸುವ ಭಾರತೀಯರನ್ನು ಕರೆತರಲು ಕೇಂದ್ರ ಸರ್ಕಾರದ ಈಚೆಗೆ ‘ಆಪರೇಷನ್‌ ಅಜಯ್‌’ ಕಾರ್ಯಾಚರಣೆ ಆರಂಭಿಸಿತ್ತು.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!