ಆಪರೇಷನ್ ಕಾವೇರಿ: ಸುಡಾನ್ ನಿಂದ ಬೆಂಗಳೂರಿಗೆ ಬಂದಿಳಿದರು 229 ಜನರು!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಸುಡಾನ್’ನಲ್ಲಿ ಸಿಲುಕಿರುವ ಭಾರತೀಯರನ್ನ ಮರಳಿ ಕರೆತರಲು ‘ಆಪರೇಷನ್ ಕಾವೇರಿ’ ಮುಂದುವರೆದಿದೆ. ಏಳನೇ ಬ್ಯಾಚ್ ಬೆಳಿಗ್ಗೆ ಜೆಡ್ಡಾದಿಂದ ಹೊರಟಿದ್ದು, 229 ಬೆಂಗಳೂರಿಗೆ ಆಗಮಿಸಿದ್ದಾರೆ.

ವಿದೇಶಾಂಗ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ ಟ್ವೀಟ್ ಮಾಡುವ ಮೂಲಕ ಈ ಮಾಹಿತಿಯನ್ನ ಹಂಚಿಕೊಂಡಿದ್ದಾರೆ. ಅವರೆಲ್ಲರೂ ಇಂದು ವಿಮಾನದ ಮೂಲಕ ಸುರಕ್ಷಿತವಾಗಿ ಬೆಂಗಳೂರು ತಲುಪಿದ್ದಾರೆ ಎಂದಿದ್ದಾರೆ.

ಇದಕ್ಕೂ ಮುನ್ನ ಮಂಗಳವಾರ 365 ಭಾರತೀಯ ಪ್ರಜೆಗಳನ್ನ ಹೊತ್ತ ಆರನೇ ವಿಮಾನವು ಆಪರೇಷನ್ ಕಾವೇರಿ ಅಡಿಯಲ್ಲಿ ಜೆಡ್ಡಾದಿಂದ ದೆಹಲಿಗೆ ಹೊರಟಿತು. ಭಾರತೀಯ ಪ್ರಜೆಗಳನ್ನ ಹೊತ್ತ ಮತ್ತೊಂದು ವಿಮಾನ ಜೆಡ್ಡಾದಿಂದ ದೆಹಲಿಗೆ ಹೊರಟಿದೆ ಎಂದು ವಕ್ತಾರ ಅರಿಂದಮ್ ಬಾಗ್ಚಿ ಶನಿವಾರ ಟ್ವೀಟ್ ಮಾಡಿದ್ದಾರೆ. ಈ ಮೂಲಕ 365 ಪ್ರಯಾಣಿಕರು ತಮ್ಮ ಮನೆಗಳಿಗೆ ಮರಳಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!