ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಸ್ರೇಲ್ ಹಾಗೂ ಇರಾನ್ ನಡುವೆ ಸಂಘರ್ಷ ಇರುವ ಕಾರಣ ಅಲ್ಲಿದ್ದ ಭಾರತೀಯ ಪ್ರಜೆಗಳು ತಾಯ್ನಾಡಿಗೆ ವಾಪಸ್ಸಾಗುತ್ತಿದ್ದಾರೆ.
‘ಆಪರೇಷನ್ ಸಿಂಧು’ ಕಾರ್ಯಾಚರಣೆಯಡಿ ಇಂದು 224 ಭಾರತೀಯ ಪ್ರಜೆಗಳು ಇಸ್ರೇಲ್ ನಿಂದ ದೆಹಲಿಗೆ ಆಗಮಿಸಿದರು. ಅವರನ್ನು ಪಾಲಂ ವಿಮಾನ ನಿಲ್ದಾಣದಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಸ್ವಾಗತಿಸಿದರು.
ಇಲ್ಲಿಯವರೆಗೂ ಇಸ್ರೇಲ್ ನಿಂದ ‘ಆಪರೇಷನ್ ಸಿಂಧು’ ಕಾರ್ಯಾಚರಣೆಯಡಿ 818 ಭಾರತೀಯ ಪ್ರಜೆಗಳು ಭಾರತಕ್ಕೆ ಆಗಮಿಸಿದ್ದಾರೆ.
ಇಸ್ರೇಲ್ ಮತ್ತು ಇರಾನ್ ನಡುವಿನ ಇತ್ತೀಚಿನ ಬೆಳವಣಿಗೆಗಳನ್ನು ಗಮನದಲ್ಲಿಟ್ಟುಕೊಂಡು ಇಸ್ರೇಲ್ ನಿಂದ ಹೊರ ಹೋಗಲು ಬಯಸುವ ಭಾರತೀಯ ಪ್ರಜೆಗಳನ್ನು ಸ್ಥಳಾಂತರಿಸಲು ಭಾರತ ಸರ್ಕಾರ ನಿರ್ಧರಿಸಿತ್ತು.