‘ಆಪರೇಷನ್ ಸಿಂಧು’ ಯಶಸ್ವಿ.. ಯುದ್ಧ ಪೀಡಿತ ಇರಾನ್‌ನಿಂದ 11 ಕನ್ನಡಿಗರು ವಾಪಾಸ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಆಪರೇಷನ್ ಸಿಂಧು ಕಾರ್ಯಾಚರಣೆ ಮೂಲಕ ಯುದ್ಧ ಪೀಡಿತ ಇರಾನ್‌ನಿಂದ 11 ಕನ್ನಡಿಗರನ್ನು ವಾಪಸ್ ಕರೆದುಕೊಂಡು ಬರಲಾಗಿದೆ.

ಶನಿವಾರ ಮಧ್ಯರಾತ್ರಿ ಟೆಹ್ರಾನ್ ನಿಂದ ದೆಹಲಿಗೆ 11 ಕನ್ನಡಿಗರು ಆಗಮಿಸಿದ್ದಾರೆ. ದೆಹಲಿಯಿಂದ ಬೆಂಗಳೂರಿಗೆ ಇಂಡಿಗೋ ವಿಮಾನದಲ್ಲಿ ವಿದ್ಯಾರ್ಥಿಗಳು ಇಂದು ಬೆಂಗಳೂರಿಗೆ ತಲುಪಲಿದ್ದಾರೆ.

ಜೂ.19ರಂದು ಇರಾನ್‍ನಿಂದ ಹೊರಟಿದ್ದ 110 ವಿದ್ಯಾರ್ಥಿಗಳು ದೆಹಲಿ ತಲುಪಿದ್ದರು. ವಿದ್ಯಾರ್ಥಿಗಳು ಇರಾನ್‍ನಿಂದ ಅರ್ಮೇನಿಯಾದ ಮೂಲಕ ಭಾರತಕ್ಕೆ ಬಂದಿದ್ದರು.

ಸಂಘರ್ಷದಿಂದ ಇಸ್ರೇಲ್‍ನಲ್ಲಿ ಸಿಲುಕಿದ್ದ 18 ಕನ್ನಡಿಗರು ಜೂ.19ರಂದು ಬೆಂಗಳೂರಿಗೆ ಆಗಮಿಸಲಿದ್ದರು. ಇಸ್ರೇಲ್‍ನಲ್ಲಿ ತುರ್ತು ಪರಿಸ್ಥಿತಿ ಘೋಷಣೆಯಾದ ಹಿನ್ನೆಲೆ ಅಲ್ಲೇ ಉಳಿದಿದ್ದರು. ಈಗಾಗಲೇ ಈ ತಂಡ ಕರ್ನಾಟಕಕ್ಕೆ ವಾಪಸ್‌ ಆಗಿದೆ.

 

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!