ಪಾಕ್ ವಿರುದ್ಧ ‘ಆಪರೇಷನ್‌ ಸಿಂದೂರ್’ ಕಾರ್ಯಾಚರಣೆ: ಭಾರತಕ್ಕೆ ಬೆಂಬಲ ಸೂಚಿಸಿದ ನೇಪಾಳ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಭಾರತ ‘ಆಪರೇಷನ್‌ ಸಿಂದೂರ’ ಕಾರ್ಯಾಚರಣೆಗೆ ಪಾಕಿಸ್ತಾನ ತತ್ತರಿಸಿದ್ದು, ಈ ನಡುವೆ ನೇಪಾಳ ಭಾರತಕ್ಕೆ ತನ್ನ ಬೆಂಬಲವನ್ನು ವ್ಯಕ್ತಪಡಿಸಿದೆ.

ಗುರುವಾರ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ ವಿದೇಶಾಂಗ ಸಚಿವಾಲಯ, ಏಪ್ರಿಲ್ 22 ರಂದು ನಡೆದ ಭಯೋತ್ಪಾದಕ ದಾಳಿಯ ನಂತರ ಭಾರತ ಮತ್ತು ಪಾಕಿಸ್ತಾನದ ನಡುವೆ ಹೆಚ್ಚುತ್ತಿರುವ ಉದ್ವಿಗ್ನತೆಯ ಬಗ್ಗೆ ನೇಪಾಳ ಸರ್ಕಾರ ತೀವ್ರ ಕಳವಳ ವ್ಯಕ್ತಪಡಿಸಿದೆ. ಈ ದಾಳಿಯಲ್ಲಿ ನೇಪಾಳಿ ಪ್ರಜೆ ಸೇರಿದಂತೆ 26 ಜನರು ಸಾವನ್ನಪ್ಪಿದ್ದರು. ಈ ದುರಂತದ ಸನ್ನಿವೇಶದಲ್ಲಿ ನೇಪಾಳ ಮತ್ತು ಭಾರತ ಒಗ್ಗಟ್ಟಿನಿಂದ ನಿಂತವು. ದುಃಖ ಮತ್ತು ಸಂಕಟ ಹಂಚಿಕೊಂಡು ಒಂದಾಗಿವೆ ಎಂದು ತಿಳಿಸಿದೆ.

ನೇಪಾಳವು ಭಯೋತ್ಪಾದನೆಯ ವಿರುದ್ಧದ ದೃಢ ನಿಲುವು ತಾಳಿದೆ. ಅನಾಗರಿಕ ಭಯೋತ್ಪಾದಕ ದಾಳಿಯನ್ನು ನಿಸ್ಸಂದಿಗ್ಧವಾಗಿ ಖಂಡಿಸಿದೆ. ಭಯೋತ್ಪಾದನೆಯ ವಿರುದ್ಧದ ಹೋರಾಟದಲ್ಲಿ ನೇಪಾಳ ಎಲ್ಲರೊಂದಿಗೂ ಒಟ್ಟಾಗಿ ನಿಲ್ಲುತ್ತದೆ. ಯಾವುದೇ ಶತ್ರು ಶಕ್ತಿಗಳು ತನ್ನ ನೆರೆಯ ರಾಷ್ಟ್ರಗಳ ವಿರುದ್ಧ ತನ್ನ ಮಣ್ಣನ್ನು ಬಳಸಲು ಅನುಮತಿಸುವುದಿಲ್ಲ ಎಂದು ನೇಪಾಳ ಸ್ಪಷ್ಟಪಡಿಸಿದೆ ಎಂದು ಸಚಿವಾಲಯ ಹೇಳಿದೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!