ಬಜೆಟ್ ಕುರಿತು ಪ್ರತಿಪಕ್ಷಗಳು ಜನರ ದಾರಿ ತಪ್ಪಿಸುತ್ತಿವೆ: ಕೇಂದ್ರ ಸಚಿವ ಕಿರಣ್ ರಿಜಿಜು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಕೇಂದ್ರ ಬಜೆಟ್ ಅನ್ನು ಶ್ಲಾಘಿಸಿದರು ಮತ್ತು ಪ್ರತಿಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಕೇಂದ್ರವು ಎರಡು ರಾಜ್ಯಗಳಿಗೆ ಮಂಡಿಸಿದ ಬಜೆಟ್ ಎಂದು ಹೇಳುವ ಮೂಲಕ ಜನರನ್ನು ದಾರಿತಪ್ಪಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಹೇಳಿದರು.

ಜುಲೈ 23 ರಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ ಕೇಂದ್ರ ಬಜೆಟ್ ವಿರುದ್ಧ I.N.D.I.A ಬ್ಲಾಕ್ ಸಂಸದರು ಸಂಸತ್ತಿನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ವಿರೋಧ ಪಕ್ಷಗಳು 2024 ರ ಕೇಂದ್ರ ಬಜೆಟ್ ಅನ್ನು “ತಾರತಮ್ಯದ ಬಜೆಟ್” ಎಂದು ಆರೋಪಿಸಿದ್ದಾರೆ.

‘‘ಬಜೆಟ್ ನಿಜಕ್ಕೂ ಚೆನ್ನಾಗಿದ್ದು, ಎಲ್ಲರೂ ಸ್ವಾಗತಿಸಿದ್ದಾರೆ. ಕೇವಲ 2 ರಾಜ್ಯಗಳ ಬಜೆಟ್ ಎಂದು ಹೇಳುವ ಮೂಲಕ ಪ್ರತಿಪಕ್ಷಗಳು ದಾರಿ ತಪ್ಪಿಸುವ ಯತ್ನ ನಡೆಸುತ್ತಿವೆ. ಮೂಲಸೌಕರ್ಯ ನಿರ್ಮಾಣಕ್ಕೆ 11 ಲಕ್ಷದ 11 ಸಾವಿರದ 111 ಕೋಟಿ ರೂ. ಬಂಡವಾಳ ವೆಚ್ಚ ಮೀಸಲಿಟ್ಟಿದ್ದು 1 -2 ರಾಜ್ಯಗಳಿಗಲ್ಲ ಇದು ಇಡೀ ದೇಶಕ್ಕೆ,” ಎಂದರು.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!