ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನ ಜಯನಗರ 4ನೇ ಹಂತದ ಶ್ರೀ ವಿನಾಯಕ ದೇವಾಲಯದ ಆವರಣವನ್ನು ಇಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಅವರು ಸ್ವಚ್ಛಗೊಳಿಸಲಾಯಿತು. ಈ ಮೂಲಕ ಮೋದಿ ಕರೆಗೆ ಸಾಥ್ ನೀಡಿದರು.
ಈ ಬಗ್ಗೆ ಇಂದು ಎಕ್ಸ್ ಮಾಡಿರುವ ಅವರು, ‘ರಾಮಮಂದಿರದ ಭವ್ಯ ಸ್ವಾಗತಕ್ಕಾಗಿ ಸ್ವಚ್ಛತೀರ್ಥ ಅಭಿಯಾನ’ ಅಯೋಧ್ಯೆಯಲ್ಲಿ ಐತಿಹಾಸಿಕ ಶ್ರೀ ರಾಮನ ಪ್ರಾಣಪ್ರತಿಷ್ಠೆ ನಡೆಯಲಿರುವ ಹಿನ್ನೆಲೆಯಲ್ಲಿ ದೇಶದಾದ್ಯಂತ ಎಲ್ಲಾ ದೇಗುಲ ಮತ್ತು ತೀರ್ಥಕ್ಷೇತ್ರಗಳಲ್ಲಿ ಸ್ವಚ್ಛತಾ ಕಾರ್ಯ ನಡೆಸಲು ಪ್ರಧಾನಿ ನರೇಂದ್ರ ಮೋದಿ ಜೀ ಅವರ ಕರೆ ಮೇರೆಗೆ ಜಯನಗರ 4ನೇ ಹಂತದ ಶ್ರೀ ವಿನಾಯಕ ದೇವಾಲಯದ ಆವರಣವನ್ನು ಸ್ವಚ್ಛಗೊಳಿಸಲಾಯಿತು ಎಂದಿದ್ದಾರೆ.
ಈ ಸಂದರ್ಭದಲ್ಲಿ ಸಂಸದ ಮುನಿಸ್ವಾಮಿ, ಶಾಸಕ ಸಿ ಕೆ ರಾಮಮೂರ್ತಿ, ಮುಖಂಡರು, ಕಾರ್ಯಕರ್ತರು ಭಾಗವಹಿಸಿದ್ದರು.