ಜಾತಿ ಗಣತಿ ವರದಿಗೆ ವಿರೋಧ: ಜ.28ಕ್ಕೆ ಅಹಿಂದ ಸಮಾವೇಶದ ಮೂಲಕ ಸಿಎಂ ಪ್ರತ್ಯುತ್ತರ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಜಾತಿ ಗಣತಿ ವರದಿಯನ್ನು ಕಾಂಗ್ರೆಸ್ ಅಂಗೀಕರಿಸಿದೆ. ಆದರೆ ಇದಕ್ಕೆ ವೀರಶೈವ ಲಿಂಗಾಯತ ಹಾಗೂ ಒಕ್ಕಲಿಗ ಸಮುದಾಯಗಳು ಸಂಪೂರ್ಣ ವಿರೋಧ ವ್ಯಕ್ತಪಡಿಸಿವೆ.

ಈ ಬಗ್ಗೆ ಉತ್ತರ ನೀಡಲು ಸಿಎಂ ಸಿದ್ದರಾಮಯ್ಯ ಸಜ್ಜಾಗಿದ್ದು, ಅಹಿಂದ ( ಅಲ್ಪಸಂಖ್ಯಾತ, ಹಿಂದುಳಿದ, ದಲಿತರು) ಸಮಾವೇಶ ಆಯೋಜನೆ ಮಾಡಲಿದ್ದಾರೆ. ಜ.28ರಂದು ಚಿತ್ರದುರ್ಗದಲ್ಲಿ ಈ ಸಮಾವೇಶ ನಡೆಯಲಿದೆ.

2024ರ ಲೋಕಸಭಾ ಚುನಾವಣೆಯಲ್ಲಿ ಅಹಿಂದ ಸಮಾವೇಶ, ಚಿತ್ರದುರ್ಗ, ಹಾವೇರಿ ಮತ್ತು ಕೊಪ್ಪಳ ಹಾಗೂ ಉತ್ತರ ಕರ್ನಾಟಕದ ಕೆಲವು ಸ್ಥಾನಗಳಲ್ಲಿ ಆಡಳಿತಾರೂಢ ಕಾಂಗ್ರೆಸ್‌ಗೆ ಸಹಾಯ ಮಾಡುವ ಸಾಧ್ಯತೆಯಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!