ಕೇಜ್ರಿವಾಲ್ ಬಂಧನಕ್ಕೆ ವಿರೋಧ: ಆಪ್ ನಿಂದ ‘ಡಿಪಿ’ ಬದಲಾಯಿಸಿ ಅಭಿಯಾನಕ್ಕೆ ಕರೆ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:
 
ಮದ್ಯ ನೀತಿ ಹಗರಣದಲ್ಲಿ ಬಂಧನಕ್ಕೊಳಗಾದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಬೆಂಬಲಿಸಿ ಆಮ್ ಆದ್ಮಿ ಪಕ್ಷ ಸೋಮವಾರ ಸೋಶಿಯಲ್ ಮೀಡಿಯಾ ಅಭಿಯಾನವನ್ನು ಪ್ರಾರಂಭಿಸಿದೆ.

ಈ ಕುರಿತು ಮಾಹಿತಿ ನೀಡಿದ ಎಎಪಿ ನಾಯಕಿ ಮತ್ತು ದೆಹಲಿ ಸಚಿವೆ ಅತಿಶಿ, ಸಾಮಾಜಿಕ ಮಾಧ್ಯಮ ಸೈಟ್ ಗಳಲ್ಲಿ ಡಿಪಿ ಬದಲಾಯಿಸಲು ಪ್ರದರ್ಶನ ಚಿತ್ರವನ್ನು ಬಿಡುಗಡೆ ಮಾಡಿದರು. ಜೊತೆಗೆ ಎಲ್ಲಾ ಎಎಪಿ ಸದಸ್ಯರು ತಮ್ಮ ಡಿಪಿಗಳನ್ನು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಜೈಲಿನ ಹಿಂದೆ ತೋರಿಸುವ ಚಿತ್ರಕ್ಕೆ ಬದಲಾಯಿಸುತ್ತಾರೆ ಎಂದು ಹೇಳಿದರು.

ಅರವಿಂದ್ ಕೇಜ್ರಿವಾಲ್ ಅವರ ಸ್ಫೂರ್ತಿ ದೇಶದ ಎಲ್ಲಾ ಭಾಗಗಳನ್ನು ತಲುಪುವುದನ್ನು ಖಚಿತಪಡಿಸಿಕೊಳ್ಳಲು, ನಾವು ಇಂದು ಸಾಮಾಜಿಕ ಮಾಧ್ಯಮದಲ್ಲಿ ಡಿಪಿ ಅಭಿಯಾನವನ್ನು ಪ್ರಾರಂಭಿಸುತ್ತಿದ್ದೇವೆ. ಆಮ್ ಆದ್ಮಿ ಪಕ್ಷದ ಎಲ್ಲಾ ನಾಯಕರು, ಶಾಸಕರು ಮತ್ತು ಕಾರ್ಯಕರ್ತರು ತಮ್ಮ ಡಿಪಿಗಳನ್ನು ಬದಲಾಯಿಸುತ್ತಾರೆ ಎಂದು ಐತಿಶಿ ಹೇಳಿದರು.

ಈ ಮೂಲಕ ಪ್ರಜಾಪ್ರಭುತ್ವ ಮತ್ತು ಸಂವಿಧಾನವನ್ನು ಉಳಿಸುವುದಾಗಿದ್ದು, ಇದು ಕೇವಲ ಕೇಜ್ರಿವಾಲ್ ಅವರ ಹೋರಾಟವಲ್ಲ ಎಂದು ಪಕ್ಷದ ಸಾಮಾಜಿಕ ಮಾಧ್ಯಮ ಡಿಪಿ ಅಭಿಯಾನಕ್ಕೆ ಸೇರುವಂತೆ ಅತಿಶಿ ಜನರನ್ನು ಒತ್ತಾಯಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!