ಹೊಸದಿಗಂತ ಡಿಜಿಟಲ್ ಡೆಸ್ಕ್ :
ರಾಜ್ಯ ವಿಧಾನಸಭೆಯ ಕಲಾಪದ ವೇಳೆಯ ವಿಪಕ್ಷಗಳ ಸದಸ್ಯರಿಂದ ಗದ್ದಲ, ಕೋಲಾಹರದಿಂದ ಸ್ಥಗಿತವಾಗಿದ್ದು, ಕಲಾಪವನ್ನು ನಾಳೆ ಬೆಳಿಗ್ಗೆ 11 ಗಂಟೆಗೆ ಮುಂದೂಡಿಕೆ ಮಾಡಲಾಗಿದೆ.
ರಾಜ್ಯ ಸರ್ಕಾರದ ವಿರುದ್ಧ ಕಮೀಷನ್ ಆರೋಪವನ್ನು ಕಾಂಗ್ರೆಸ್ ಮಾಡಿದ ಹಿನ್ನಲೆಯಲ್ಲಿ ವಿಧಾನಸಭೆಯ ಕಲಾಪದ ವೇಳೆಯಲ್ಲಿ ಸದನದಲ್ಲಿ ಗದ್ದಲ ಏರ್ಪಟ್ಟಿತ್ತು.
ಸದನದಲ್ಲಿನ ಗದ್ದಲವನ್ನು ತಡೆಯುವ ನಿಟ್ಟಿನಲ್ಲಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಪ್ರಯತ್ನಿಸಿದರು. ಆದ್ರೇ ನಿಯಂತ್ರಣಕ್ಕೆ ಬರಲಿಲ್ಲ. ಈ ಹಿನ್ನಲೆಯಲ್ಲಿ ಸದನವನ್ನು ನಾಳೆ ಬೆಳಿಗ್ಗೆ 11 ಗಂಟೆಗೆ ಮುಂದೂಡಿಕೆ ಮಾಡಿದರು.