ಮಹಾರಾಷ್ಟ್ರದ ಕೆಲವೆಡೆ ಭಾರೀ ಮಳೆ: ರಾಯಘಡ, ರತ್ನಗಿರಿಯಲ್ಲಿ ಆರೆಂಜ್ ಅಲರ್ಟ್ ಘೋಷಣೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಮಹಾರಾಷ್ಟ್ರದ ಕೆಲವು ಭಾಗಗಳಲ್ಲಿ ಭಾರೀ ಮಳೆಯಾಗುತ್ತಿರುವ ಕಾರಣ ಭಾರತೀಯ ಹವಾಮಾನ ಇಲಾಖೆ (IMD) ರಾಯಘಡ ಮತ್ತು ರತ್ನಗಿರಿಯಲ್ಲಿ ಹಳದಿ ಅಲರ್ಟ್ ಘೋಷಿಸಿದೆ. ಏತನ್ಮಧ್ಯೆ, ನೈಋತ್ಯ ಮುಂಗಾರು ಭಾನುವಾರ ಮುಂಬೈ ಮತ್ತು ದೆಹಲಿಯಲ್ಲಿ ಮುಂದುವರೆದಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ಪಾಲ್ಘರ್, ಮುಂಬೈ, ಥಾಣೆ ಮತ್ತು ಸಿಂಧುದುರ್ಗದಲ್ಲಿ ಹವಾಮಾನ ಇಲಾಖೆ ಹಳದಿ ಅಲರ್ಟ್ ಘೋಷಿಸಿದೆ. ಪ್ರಾದೇಶಿಕ ಹವಾಮಾನ ಕೇಂದ್ರದ ಪ್ರಕಾರ, ಕಳೆದ 24 ಗಂಟೆಗಳಲ್ಲಿ ಮುಂಬೈ ನಗರದಲ್ಲಿ 104 ಮಿಮೀ ಮತ್ತು ಪೂರ್ವ ಉಪನಗರಗಳು ಮತ್ತು ಪಶ್ಚಿಮ ಉಪನಗರಗಳಲ್ಲಿ ಕ್ರಮವಾಗಿ 123 ಮಿಮೀ ಮತ್ತು 139 ಮಿಮೀ ಮಳೆಯಾಗಿದೆ.

ಶನಿವಾರ ಮುಂಜಾನೆ, ಭಾರೀ ಮಳೆಯಿಂದ ಜಲಾವೃತಗೊಂಡ ನಂತರ ಮುಂಬೈನ ಅಂಧೇರಿ ಸುರಂಗಮಾರ್ಗವನ್ನು ವಾಹನ ಸಂಚಾರಕ್ಕಾಗಿ ಮುಚ್ಚಲಾಗಿತ್ತು.

“ಮುಂದಿನ 4-5 ದಿನಗಳಲ್ಲಿ ಮಹಾರಾಷ್ಟ್ರದ ಕೆಲವು ಭಾಗಗಳಲ್ಲಿ ಮಳೆಯ ತೀವ್ರತೆಯು ಕ್ರಮೇಣ ಹೆಚ್ಚಾಗಲಿದೆ. ಮುಂದಿನ 5 ದಿನಗಳಲ್ಲಿ ನಿರೀಕ್ಷಿತ ತೀವ್ರ ಹವಾಮಾನದ ಸೂಚನೆ” ಎಂದು ಪ್ರಾದೇಶಿಕ ಹವಾಮಾನ ಕೇಂದ್ರ ತಿಳಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!