ಈದ್ಗಾ ಮೈದಾನದಲ್ಲಿ ಧ್ಚಜಾರೋಹಣ ಮಾಡಲು ಸರಕಾರದಿಂದ ಆದೇಶ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಬೆಂಗಳೂರು ನಗರದ ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಸರ್ಕಾರದ ವತಿಯಿಂದ ಧ್ಚಜಾರೋಹಣ ಮಾಡಲು ಆದೇಶ ಹೊರಡಿಸಲಾಗಿದೆ.
ಆಗಸ್ಟ್ 15ರಂದು ಬೆಂಗಳೂರು ಉತ್ತರ ಉಪವಿಭಾಗದ ಉಪವಿಭಾಗಾಧಿಕಾರಿಗೆ ಧ್ವಜಾರೋಹಣ ಮಾಡಲು ಅನುಮತಿ ನೀಡಲಾಗಿದೆ.
ಚಾಮರಾಜಪೇಟೆ ಆಟದ ಮೈದಾನದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮವನ್ನು ಆಚರಿಸಲು ಅನುಮತಿ ನೀಡಬೇಕೆಂದು ಕೋರಿ ವಿವಿಧ ಸಂಘಟನೆಗಳು ಮನವಿ ಸಲ್ಲಿಸಿದ್ದರು. ವಿವಿಧ ಸಂಘಟನೆಗಳಿಗೆ ಧ್ವಜಾರೋಹಣ ಮಾಡಲು ಅನುಮತಿ ನೀಡಿದಲ್ಲಿ, ಶಾಂತಿಭಂಗವಾಗುವ ಸಾಧ್ಯತೆಗಳಿರುತ್ತವೆ. ಈ ಹಿನ್ನೆಲೆಯಲ್ಲಿ ಸರ್ಕಾರದ ವತಿಯಿಂದಲೇ ಧ್ವಜಾರೋಹಣ ಮಾಡಲು ಅನುಮತಿ ಕೋರಲಾಗಿತ್ತು. ಅದರಂತೆ ಇದೀಗ ಈದ್ಗಾ ಮೈದಾನದಲ್ಲಿ ಉಪವಿಭಾಗಾಧಿಕಾರಿಗೆ ಧ್ವಜಾರೋಹಣ ಮಾಡುವಂತೆ ಕಂದಾಯ ಇಲಾಖೆ ಆದೇಶ ಹೊರಡಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!