ಸಂಘಟನಾ ಚತುರ ನಳಿನ್‌ಕುಮಾರ್ ಕಟೀಲ್‌ಗೆ ಕೇರಳ ಲೋಕಸಭಾ ಚುನಾವಣೆ ಸಹ ಉಸ್ತುವಾರಿ ಪಟ್ಟ

ಹೊಸದಿಗಂತ, ಮಂಗಳೂರು:

ಹಾಲಿ ಸಂಸದ, ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ನಳಿನ್‌ಕುಮಾರ್ ಕಟೀಲ್‌ಗೆ ಪಕ್ಷದ ಹೈಕಮಾಂಡ್ ಮಹತ್ವದ ಹುದ್ದೆ ನೀಡಿದ್ದು, ಅವರನ್ನು ಕೇರಳ ಲೋಕಸಭಾ ಚುನಾವಣೆಯ ಸಹ ಉಸ್ತುವಾರಿಯ ಜವಾಬ್ದಾರಿ ನೀಡಲಾಗಿದೆ.

ಸಂಸದನಾಗಲು ಮೂರು ಬಾರಿ ಅವಕಾಶ ಸಿಕ್ಕಿದೆ. ಪಕ್ಷ ನಿಂತ ನೀರಾಗಬಾರದು, ಹೊಸಬರು ಬರುತ್ತಿರಬೇಕು. ಹೈಕಮಾಂಡ್ ತೆಗೆದುಕೊಳ್ಳುವ ಯಾವುದೇ ತೀರ್ಮಾನಕ್ಕೆ ನಾನು ಬದ್ಧ. ಪಕ್ಷ ಕಸ ಗುಡಿಸಿ ಎಂದರೂ ಗುಡಿಸುತ್ತೇನೆ ಎಂದು ಇತ್ತೀಚೆಗಷ್ಟೇ ನಳಿನ್ ಮಾಧ್ಯಮಗಳ ಮುಂದೆ ಹೇಳಿಕೆ ನೀಡಿದ್ದರು.

ಸಮರ್ಥ ಸಂಘಟನಾ ಚತುರ ಎಂದು ಗುರುತಿಸಿಕೊಂಡಿರುವ ಕಟೀಲ್‌ಗೆ ಈಗ ನೂತನ ಹೊಣೆ ಹೊರಿಸಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಆದೇಶಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!