ರೈತರ ಬದುಕು ಬದಲಿಸಲು ನಮ್ಮ ಸರ್ಕಾರ ಬದ್ಧವಾಗಿದೆ, ನಿಮ್ಮ ಆಶೀರ್ವಾದ ಬೇಕಷ್ಟೆ: ಡಿಕೆಶಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ರೈತರ ಬದುಕು ಬದಲಿಸಲು ನಮ್ಮ ಸರ್ಕಾರ ಬದ್ಧವಾಗಿದೆ. ನಾವು ಕೊಟ್ಟ ಮಾತಿನಂತೆ ನಡೆದು ಜನರ ಆಶೋತ್ತರ ಈಡೇರಿಸಿದ್ದೇವೆ. 2027ರ ಒಳಗಾಗಿ ಎತ್ತಿನ ಹೊಳೆ ನೀರನ್ನು ತುಮಕೂರು ಮಾರ್ಗವಾಗಿ ಹರಿಸಲು ತೀರ್ಮಾನಿಸಿದ್ದೇವೆ. ಕುಡಿಯುವ ನೀರು ಪೂರೈಸಿದ ನಂತರ ಕೆರೆ ತುಂಬಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭರವಸೆ ನೀಡಿದರು.

ನಾವು ನಿಮಗೆ ನುಡಿದಂತೆ ನಡೆದಿದ್ದು, ನಮಗೆ ನಿಮ್ಮ ಆಶೀರ್ವಾದ ಬೇಕು. ನೀವು ಎಲ್ಲಿಯವರೆಗೂ ಆಶೀರ್ವಾದ ಮಾಡುತ್ತೀರೋ ಅಲ್ಲಿಯವರೆಗೆ ನಿಮ್ಮ ಪರವಾಗಿ ಕೆಲಸ ಮಾಡುತ್ತೇವೆ. ನಾವು ಪರಮೇಶ್ವರ್ ಅವರ ನೇತೃತ್ವದಲ್ಲಿ ಪ್ರಣಾಳಿಕೆ ಸಮಿತಿ ರಚಿಸಿದ್ದೆವು. ನಮ್ಮ ಸರ್ಕಾರ 2 ವರ್ಷದಲ್ಲೇ 70% ಪ್ರಣಾಳಿಕೆಯಲ್ಲಿರುವ ಭರವಸೆ ಪೂರ್ಣಗೊಳಿಸಿದ್ದೇವೆ. ನಮ್ಮ ಈ ಹಿಂದಿನ ಸರ್ಕಾರದಲ್ಲಿ 165 ಭರವಸೆಗಳ ಪೈಕಿ 145ಕ್ಕೂ ಹೆಚ್ಚಿನ ಭರವಸೆ ಈಡೇರಿಸಿದ್ದೆವು ಎಂದು ಹೇಳಿದರು.

ನಮ್ಮ ಗ್ಯಾರಂಟಿ ಹಾಗೂ ಎಲ್ಲಾ ಇಲಾಖೆಗಳಲ್ಲಿನ ಅಭಿವೃದ್ಧಿ ಯೋಜನೆ ದೇಶಕ್ಕೆ ಮಾದರಿಯಾಗಿದೆ. 4 ಲಕ್ಷ ಕೋಟಿಗೂ ಹೆಚ್ಚಿನ ಬಜೆಟ್ ಮಂಡಿಸಿ ಎಲ್ಲಾ ಇಲಾಖೆಗಳಲ್ಲಿ ಅಭಿವೃದ್ಧಿ ಕೆಲಸ ಮಾಡುತ್ತಿದ್ದೇವೆ. ಇತ್ತೀಚೆಗೆ ವಿಜಯನಗರದಲ್ಲಿ 1,11,111 ಮಂದಿ ತಾಂಡಾ, ಬುಡಕಟ್ಟು ಜನರಿಗೆ, ಆರನೇ ಗ್ಯಾರಂಟಿ ಭೂ ಗ್ಯಾರಂಟಿ ಮೂಲಕ ಭೂಮಿ ದಾಖಲೆ ಉಚಿತವಾಗಿ ಹಂಚಿದ್ದೇವೆ ಎಂದರು.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!