ಹೊಸದಿಗಂತ ಡಿಜಿಟಲ್ ಡೆಸ್ಕ್:
ಗ್ಯಾರೆಂಟಿ ಯೋಜನೆಗಳ ಜಾರಿಯಿಂದ ನಮ್ಮ ಸರ್ಕಾರ ದಿವಾಳಿಯಾಗಿಲ್ಲ. ಈ ಬಾರಿ ಬಜೆಟ್ ಗಾತ್ರ 3.80 ಲಕ್ಷ ಕೋಟಿ ರೂಪಾಯಿಗಳಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಇಷ್ಟು ದೊಡ್ಡ ಬಜೆಟ್ ಮಂಡನೆ ಆಗುತ್ತಿದೆ ಎಂದರೆ ರಾಜ್ಯದಲ್ಲಿ ಎಷ್ಟೆಲ್ಲಾ ಅಭಿವೃದ್ಧಿ ಕೆಲಸಗಳು ಆಗಬಹುದು ಯೋಚಿಸಿ. ಸರ್ಕಾರ ಜಾರಿಗೆ ಬಂದ ಎಂಟು ತಿಂಗಳಿನಲ್ಲಿ ಎಲ್ಲ ಗ್ಯಾರೆಂಟಿಗಳನ್ನು ಜಾರಿಗೆ ತಂದಿದ್ದೇವೆ.
ಇದರಿಂದಾಗಿ ಸರ್ಕಾರದ ಖಜಾನೆ ಖಾಲಿಯಾಗಿದೆ ಎಂದು ಎಲ್ಲರೂ ಹೇಳಿದ್ದರು. ಆದರೆ ನಮ್ಮ ಸರ್ಕಾರ ದಿವಾಳಿಯಾಗಿಲ್ಲ ಎಂದಿದ್ದಾರೆ.