ಕನ್ನಡಿಗರ ಹಿತರಕ್ಷಣೆಗೆ ನಮ್ಮ ‘ಕೈ’ಗಳು ಸದಾ ಒಂದು, ಸಿದ್ದು ಫಸ್ಟ್ ರಿಯಾಕ್ಷನ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕಡೆಗೂ ಕಾಂಗ್ರೆಸ್ ಕುರ್ಚಿ ಸಮರ ಅಂತ್ಯ ಕಂಡಿದೆ, ಸಾಕಷ್ಟು ಸಮಯದಿಂದ ಜೊತೆಯಲ್ಲೇ ಇರುವ ಡಿ.ಕೆ. ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಒಗ್ಗಟ್ಟು ಪ್ರದರ್ಶನ ಮಾಡಿದ್ದಾರೆ.

ಡಿಕೆಶಿ ಹಾಗೂ ಸಿದ್ದು ಮಧ್ಯೆ ಬಿರುಕು ಬಂದಿದೆ, ಸಿಎಂ ಸ್ಥಾನಕ್ಕಾಗಿ ಕಿತ್ತಾಟ ನಡೆದಿದೆ ಎಂಬೆಲ್ಲಾ ಸುದ್ದಿ ಹೊರಬಿದ್ದಿದ್ದು, ಸಿಎಂ ಆಗಿ ಆಯ್ಕೆಯಾದ ಬಳಿಕ ಇದೀಗ ಸಿದ್ದರಾಮಯ್ಯ ಮೊದಲ ಬಾರಿಗೆ ಟ್ವೀಟ್ ಮಾಡಿ ಮಾತನಾಡಿದ್ದಾರೆ.

ಕನ್ನಡಿಗರ ಹಿತರಕ್ಷಣೆಗೆ ನಮ್ಮ ಕೈಗಳು ಸದಾ ಒಂದಾಗಿರುತ್ತವೆ. ಜನಪರ, ಪಾರದರ್ಶಕ, ಭ್ರಷ್ಟಾಚಾರ ರಹಿತ ಆಡಳಿತ ನೀಡುವ ಜೊತೆಗೆ ಎಲ್ಲಾ ಗ್ಯಾರೆಂಟಿಗಳನ್ನು ಈಡೇರಿಸಲು ಕಾಂಗ್ರೆಸ್ ಕುಟುಂಬವಾಗಿ ಕೆಲಸ ಮಾಡಲಿದೆ ಎಂದು ಹೇಳಿದ್ದಾರೆ.

 

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!