ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಅನರ್ಹಗೊಂಡ ಬೆನ್ನಲ್ಲೆ ಸರ್ಕಾರಿ ಬಂಗಲೆ ಖಾಲಿ ಮಾಡುವಂತೆ ನೋಟಿಸ್ ನೀಡಲಾಗಿದ್ದು, ಈ ಹಿನ್ನೆಲೆ ರಾಜ್ಯ ಕಾಂಗ್ರೆಸ್ ನಾಯಕರು ವಿನೂತನ ಅಭಿಯಾನ ಆರಂಭಿಸಿದ್ದಾರೆ.
‘ನಮ್ಮ ಮನೆಯೇ ನಿಮ್ಮ ಮನೆ’ ಅಭಿಯಾನ ಕಾಂಗ್ರೆಸ್ ಶಾಸಕರು ಅಭಿಯಾನ ಆರಂಭಿಸಿದ್ದಾರೆ. ಕೆಪಿಸಿಸಿ ಕಾರ್ಯಧ್ಯಕ್ಷ ದಿನೇಶ್ ಗುಂಡುರಾವ್, ಶಾಸಕ ರಾಮಲಿಂಗಾ ರೆಡ್ಡಿ, ಶಾಸಕ ಜಮೀರ್ ಅಹ್ಮದ್ ಇನ್ನು ಅನೇಕ ನಾಯಕರು ರಾಹುಲ್ ಗಾಂಧಿಗೆ ತಮ್ಮ ನಿವಾಸಕ್ಕೆ ಆಹ್ವಾನ ನೀಡಿದ್ದಾರೆ.
ಈ ಕುರಿತು ಟ್ವೀಟ್ ಮಾಡಿದ್ದು ನಮ್ಮ ನಾಯಕರಾದ ರಾಹುಲ್ ಗಾಂಧಿಯವರನ್ನು ಬೆಂಬಲಿಸಿ “ನಮ್ಮ ಮನೆಯೂ ನಿಮ್ಮದೇ ಮನೆ” ಎಂಬ ಸಂದೇಶ ಇರುವ ಬಿತ್ತಿ ಪತ್ರವನ್ನು ಇಂದು ನನ್ನ ಮನೆಯಲ್ಲಿ ಅನಾವರಣಗೊಳಿಸಿದೆನು ಎಂದು ದಿನೇಶ್ ಗುಂಡುರಾವ್ ಪೋಸ್ಟ್ ಹಿಡಿದುಕೊಂಡು ಪೋಟೋ ಹಂಚಿಕೊಂಡಿದ್ದಾರೆ.
2019ರ ಲೋಕಸಭಾ ಚುನಾವಣೆ (Lok Sabha Election) ವೇಳೆ ಮೋದಿ ಸಮುದಾಯ ವಿರುದ್ಧ ಅವಹೇಳಕಾರಿಯಾಗಿ ಮಾತನಾಡಿದ್ದಾರೆಂಬ ಆರೋಪದ ಮೇಲೆ ನ್ಯಾಯಾಲಯದಿಂದ ಶಿಕ್ಷೆ ಮತ್ತು ಸಂಸದ (MP) ಸ್ಥಾನದಿಂದ ಎಐಸಿಸಿ (AICC) ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅನರ್ಹಗೊಂಡಿದ್ದರು. ಈ ಹಿನ್ನೆಲೆ ಸರ್ಕಾರಿ ಬಂಗಲೆ ಖಾಲಿ ಮಾಡುವಂತೆ ನೋಟಿಸ್ ನೀಡಲಾಗಿತ್ತು.