ನಮ್ಮ ಮನೆಯೂ ನಿಮ್ಮದೇ ಮನೆ: ರಾಜ್ಯ ಕಾಂಗ್ರೆಸ್​ ನಾಯಕರಿಂದ ರಾಹುಲ್​ ಗಾಂಧಿ ಆಹ್ವಾನದ ಅಭಿಯಾನ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಕಾಂಗ್ರೆಸ್ ನಾಯಕ ರಾಹುಲ್​ ಗಾಂಧಿ (Rahul Gandhi) ಅನರ್ಹಗೊಂಡ ಬೆನ್ನಲ್ಲೆ ಸರ್ಕಾರಿ ಬಂಗಲೆ ಖಾಲಿ ಮಾಡುವಂತೆ ನೋಟಿಸ್‌ ನೀಡಲಾಗಿದ್ದು, ಈ ಹಿನ್ನೆಲೆ ರಾಜ್ಯ ಕಾಂಗ್ರೆಸ್​ ನಾಯಕರು ವಿನೂತನ ಅಭಿಯಾನ ಆರಂಭಿಸಿದ್ದಾರೆ.

‘ನಮ್ಮ ಮನೆಯೇ ನಿಮ್ಮ ಮನೆ’ ಅಭಿಯಾನ ಕಾಂಗ್ರೆಸ್​ ಶಾಸಕರು ಅಭಿಯಾನ ಆರಂಭಿಸಿದ್ದಾರೆ. ಕೆಪಿಸಿಸಿ ಕಾರ್ಯಧ್ಯಕ್ಷ ದಿನೇಶ್​ ಗುಂಡುರಾವ್​, ಶಾಸಕ ರಾಮಲಿಂಗಾ ರೆಡ್ಡಿ, ಶಾಸಕ ಜಮೀರ್​ ಅಹ್ಮದ್​​ ಇನ್ನು ಅನೇಕ ನಾಯಕರು ರಾಹುಲ್ ಗಾಂಧಿಗೆ ತಮ್ಮ ನಿವಾಸಕ್ಕೆ ಆಹ್ವಾನ‌ ನೀಡಿದ್ದಾರೆ.

ಈ ಕುರಿತು ಟ್ವೀಟ್​ ಮಾಡಿದ್ದು ನಮ್ಮ ನಾಯಕರಾದ ರಾಹುಲ್ ಗಾಂಧಿಯವರನ್ನು ಬೆಂಬಲಿಸಿ “ನಮ್ಮ ಮನೆಯೂ ನಿಮ್ಮದೇ ಮನೆ” ಎಂಬ ಸಂದೇಶ ಇರುವ ಬಿತ್ತಿ ಪತ್ರವನ್ನು ಇಂದು ನನ್ನ ಮನೆಯಲ್ಲಿ ಅನಾವರಣಗೊಳಿಸಿದೆನು ಎಂದು ದಿನೇಶ್​ ಗುಂಡುರಾವ್​ ಪೋಸ್ಟ್​ ಹಿಡಿದುಕೊಂಡು ಪೋಟೋ ಹಂಚಿಕೊಂಡಿದ್ದಾರೆ.

2019ರ ಲೋಕಸಭಾ ಚುನಾವಣೆ (Lok Sabha Election) ವೇಳೆ ಮೋದಿ ಸಮುದಾಯ ವಿರುದ್ಧ ಅವಹೇಳಕಾರಿಯಾಗಿ ಮಾತನಾಡಿದ್ದಾರೆಂಬ ಆರೋಪದ ಮೇಲೆ ನ್ಯಾಯಾಲಯದಿಂದ ಶಿಕ್ಷೆ ಮತ್ತು ಸಂಸದ (MP) ಸ್ಥಾನದಿಂದ ಎಐಸಿಸಿ (AICC) ಮಾಜಿ ಅಧ್ಯಕ್ಷ ರಾಹುಲ್​ ಗಾಂಧಿ ಅನರ್ಹಗೊಂಡಿದ್ದರು. ಈ ಹಿನ್ನೆಲೆ ಸರ್ಕಾರಿ ಬಂಗಲೆ ಖಾಲಿ ಮಾಡುವಂತೆ ನೋಟಿಸ್‌ ನೀಡಲಾಗಿತ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!