ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಮದ್ಯಪ್ರಾಚ್ಯದಲ್ಲಿನ ಸಂಘರ್ಷದ ನಡುವೆಯೂ ಭಾರತದ ಹಡಗುಗಳು ಹಾರ್ಮುಜ್ ಜಲಸಂಧಿಯನ್ನು ದಾಟಿ ಸುರಕ್ಷಿತವಾಗಿ ಬರುತ್ತಿದ್ದು, ಈ ಮಧ್ಯೆ ಇರಾನ್, ಭಾರತೀಯರ ಆತಂಕ ದೂರ ಮಾಡಿದೆ.
ಈಗಾಗಲೇ ಯುದ್ಧದಿಂದಾಗಿ ಜಾಗತಿಕ ಮಟ್ಟದಲ್ಲಿ ತೈಲ ಅಭಾವ ಹೆಚ್ಚಾಗಿದ್ದು, ಅನೇಕ ರಾಷ್ಟ್ರಗಳಿಗೆ ಹಾರ್ಮುಜ್ ಜಲಸಂಧಿ ಪ್ರವೇಶ ನಿರ್ಬಂಧ ವಿದ್ದು,ಆದರೆ ಭಾರತೀಯ ಸ್ನೇಹಿತರು ಈ ಕುರಿತು ಚಿಂತಿಸುವ ಅಗತ್ಯವಿಲ್ಲ ಎಂದು ಇರಾನ್ ಭರವಸೆ ನೀಡಿದೆ.
ಈ ಕುರಿತು ಪೋಸ್ಟ್ ಮಾಡಿದ ಭಾರತದಲ್ಲಿರುವ ಇರಾನ್ ರಾಯಭಾರ ಕಚೇರಿ, ಭಾರತೀಯ ಸ್ನೇಹಿತರು ಸುರಕ್ಷಿತ ಕೈಗಳಲ್ಲಿದ್ದು, ಚಿಂತಿಸುವ ಅಗತ್ಯವಿಲ್ಲ ಎಂದು ತಿಳಿಸಿದೆ.
ಹಾರ್ಮುಜ್ ಜಲಸಂಧಿಯನ್ನು ಇರಾನ್ ನಿಯಂತ್ರಿಸುತ್ತಿದ್ದು, ಭಾರತ, ಚೀನಾ, ರಷ್ಯಾ, ಇರಾಕ್ ಸಹಿತ ಸ್ನೇಹಪರ ರಾಷ್ಟ್ರಗಳಿಗೆ ಮಾತ್ರ ದಾಟಲು ಅವಕಾಶ ನೀಡಿದೆ.



