ನಾಳೆಯಿಂದ ನೇರಳೆ ಮಾರ್ಗದಲ್ಲಿ ನಮ್ಮ ಮೆಟ್ರೋ ಸಂಚಾರ: ಕೇಂದ್ರ ಸರ್ಕಾರ ಗ್ರೀನ್ ಸಿಗ್ನಲ್

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಬೈಯಪ್ಪನಹಳ್ಳಿ – ಕೆ‌ ಆರ್ ಪುರಂ ಮತ್ತು ಚಲಘಟ್ಟ – ಕೆಂಗೇರಿ ಮಾರ್ಗದಲ್ಲಿ ಮೆಟ್ರೋ ರೈಲು ಸಂಚಾರಕ್ಕೆ ಕೇಂದ್ರ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ.

ಸರ್ಕಾರದ ಯಾವುದೇ ಔಪಚಾರಿಕ ಹಾಗೂ ಅನೌಪಚಾರಿಕ ಕಾರ್ಯಕ್ರಮಗಳಿಗೆ ಕಾಯದೇ ಅ.9 ರಿಂದ ಮೆಟ್ರೋ ಸಂಚಾರ ಆರಂಭಿಸಲು ಸೂಚನೆ ನೀಡಿದೆ.

ಬೆಂಗಳೂರು ನಮ್ಮ ಮೆಟ್ರೋದ ನೇರಳೆ ಮಾರ್ಗದ ಪೂರ್ವ-ಪಶ್ಚಿಮ ಕಾರಿಡಾರ್‌ನ ವಿಭಾಗಗಳಾದ ಬೈಯಪ್ಪನಹಳ್ಳಿ – ಕೆಆರ್ ಪುರ (2.1 ಕಿಮೀ) ಮತ್ತು ಚಲ್ಲಘಟ್ಟ – ಕೆಂಗೇರಿ (2.05 ಕಿಮೀ) ನಡುವೆ ಎರಡು ರೈಲ್ವೆ ಮಾರ್ಗಗಳಲ್ಲಿ ವಾಣಿಜ್ಯ ಸೇವೆ ಆರಂಭಿಸಿ, ಪ್ರಯಾಣಿಕರ ಕಾರ್ಯಾಚರಣೆ ಮಾಡುವಂತೆ ಮಂಜೂರು ಮಾಡಲಾಗಿದೆ. ಸೆ.25 ಮತ್ತು ಸೆ.30 ಮೆಟ್ರೋ ರೈಲು ಸುರಕ್ಷತೆ (CMRS) ಆಯುಕ್ತರಿಂದ ಸುರಕ್ಷತಾ ಪರೀಕ್ಷೆಯನ್ನು ಮಾಡಲಾಗಿದೆ. ಈ ನಿಟ್ಟಿನಲ್ಲಿ, ಮೇಲಿನ ಎರಡು ರೈಲ್ವೆ ಮಾರ್ಗಗಳನ್ನು ಔಪಚಾರಿಕವಾಗಿ ಪ್ರಯಾಣಿಕರ ಸೇವೆಗೆ ಮುಕ್ತಗೊಳಿಸುವುದಕ್ಕೆ ಅನುಮತಿ ನೀಡಲಾಗಿದೆ.

ಉಪಮುಖ್ಯಮಂತ್ರಿ , ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ. ಶಿವಕುಮಾರ್‌ ಅವರು ಸೆ.5 ರಂದು ಕೇಂದ್ರ ಸರ್ಕಾರಕ್ಕೆ ಪತ್ರವನ್ನು ಬರೆದು ಬೈಯಪ್ಪನಹಳ್ಳಿ – ಕೆಆರ್ ಪುರ ಮತ್ತು ಚಲ್ಲಘಟ್ಟ – ಕೆಂಗೇರಿ ಮಾರ್ಗಗಳನ್ನು ಔಪಚಾರಿಕವಾಗಿ ಉದ್ಘಾಟನೆ ಮಾಡಲು ದಿನಾಂಕ ನಿಗದಿ ಮಾಡುವಂತೆ ಪತ್ರವನ್ನು ಬರೆದಿದ್ದರು. ಆದರೆ, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉಪಸ್ಥಿತಿಗೆ ಮನವಿ ಮಾಡಿದ್ದರು. ಆದರೆ, ಈ ಬೆಂಗಳೂರು ನಗರದ ಪೂರ್ವದಿಂದ ಪಶ್ಚಿಮ ಭಾಗಕ್ಕೆ ತಡೆರಹಿತ ಸಂಪರ್ಕ ಪ್ರಯಾಣ ಸೇವೆ ಒದಗಿಸಲು ಬೆಂಗಳೂರಿನ ಪ್ರಯಾಣಿಕರ ದೃಷ್ಟಿಕೋನದಿಂದ ಪ್ರಮುಖವಾಗಿವೆ. ಆದ್ದರಿಂದ ಯಾವುದೇ ಔಪಚಾರಿಕ/ಅನೌಪಚಾರಿಕ ಅಧಿಕೃತ ಕಾರ್ಯವಿಲ್ಲದೆ 9 ಅಕ್ಟೋಬರ್, 2023 ರಂದು ತಕ್ಷಣವೇ ವಾಣಿಜ್ಯ ಸೇವೆಗೆ ಮುಕ್ತಗೊಳಿಸುವಂತೆ ಕೇಂದ್ರ ಸರ್ಕಾರ ಸೂಚನೆ ನೀಡಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!