ಹೊಸದಿಗಂತ ಡಿಜಿಟಲ್ ಡೆಸ್ಕ್:
ಶುಕ್ರವಾರ ಒಡಿಶಾದ ಬಾಲಸೋರ್ನಲ್ಲಿ ಸಂಭವಿಸಿದ ಭೀಕರ ಮೂರು ರೈಲುಗಳ ಅಪಘಾತದ ನಂತರ, ನಮ್ಮ ಜವಾಬ್ದಾರಿ ಇನ್ನೂ ಮುಗಿದಿಲ್ಲ, ನಾಪತ್ತೆಯಾದವರ ಕುಟುಂಬ ಸದಸ್ಯರನ್ನು ಆದಷ್ಟು ಬೇಗ ಪತ್ತೆ ಮಾಡುವುದೇ ನಮ್ಮ ಗುರಿಯಾಗಿದೆ ಎಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದಾರೆ.
ಗೂಡ್ಸ್ ರೈಲಿನ ಸಿಬ್ಬಂದಿಯತ್ತ ಕೈಬೀಸಿ ಸುರಕ್ಷಿತ ಪ್ರಯಾಣಕ್ಕಾಗಿ ಪ್ರಾರ್ಥಿಸಿದರು. ರೈಲು ಅಪಘಾತದ 51 ಗಂಟೆಗಳ ನಂತರ, ಮೇಲಿನ ಮತ್ತು ಕೆಳಗಿನ ಎರಡೂ ಮಾರ್ಗಗಳಲ್ಲಿನ ಹಾನಿಗೊಳಗಾದ ಹಳಿಗಳ ದುರಸ್ತಿ ನಂತರ ಸೇವೆಗಳು ಪುನರಾರಂಭಗೊಂಡವು.
“ಪ್ರಧಾನಿ ನರೇಂದ್ರ ಮೋದಿ ಅವರು ರೈಲ್ವೇ ಹಳಿಗಳ ಮರುಸ್ಥಾಪನೆ ಕುರಿತು ತಮ್ಮ ಸಲಹೆ ಮತ್ತು ಸೂಚನೆಗಳನ್ನು ನೀಡಿದರು. ಇಡೀ ತಂಡ (ಪುನಶ್ಚೇತನ ಕಾರ್ಯದಲ್ಲಿ ತೊಡಗಿಸಿಕೊಂಡಿದೆ) ಸೇವೆಗಳ ಪುನರಾರಂಭಕ್ಕಾಗಿ ಹಾನಿಗೊಳಗಾದ ಹಳಿಗಳನ್ನು ಸರಿಪಡಿಸಲು ಶ್ರದ್ಧೆಯಿಂದ ಕೆಲಸ ಮಾಡಿವೆ” ಎಂದರು.