ಬೇರೆ ರಾಜ್ಯಕ್ಕೆ ಹೋಲಿಸಿದರೆ ನಮ್ಮ ರಾಜ್ಯ ಸುರಕ್ಷಿತವಾಗಿದೆ: ಮೋದಿ ಮಾತಿಗೆ ಡಿಕೆಶಿ ತಿರುಗೇಟು

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂಬ ಪ್ರಧಾನಿ ಹೇಳಿಕೆಯನ್ನು ಪರಿಗಣಿಸಿ, ಯಾವ ಕಾನೂನು ಹದಗೆಟ್ಟಿದೆ ಎಂಬುದನ್ನು ಅವರೇ ಹೇಳಬೇಕು. ಬೇರೆ ರಾಜ್ಯಗಳಿಗೆ ಹೋಲಿಸಿದರೆ ನಮ್ಮ ರಾಜ್ಯ ಅತ್ಯಂತ ಸುರಕ್ಷಿತವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.

ನಗರದ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅಟಲ್ ಬಿಹಾರಿ ವಾಜಪೇಯಿ ಅವರ ಬೆಂಗಳೂರಿನ ಕುರಿತು ಮಾತನಾಡಿದರು. ವಿಶ್ವ ನಾಯಕರು ಬೆಂಗಳೂರಿಗೆ ಬಂದು ದೆಹಲಿಗೆ ಹೋಗುತ್ತಾರೆ. ಅವರಿಗೆ ನಮ್ಮ ರಾಜ್ಯದಲ್ಲಿ ಮತ ಬರಲಿಲ್ಲ ಎಂದು ಈ ರೀತಿ ಮಾತನಾಡಿದ್ದಾರೆ. ಪ್ರಧಾನಿಯವರ ಆರೋಪ ಸುಳ್ಳು. ಕರ್ನಾಟಕ ಸುವ್ಯವಸ್ಥಿತ ರಾಜ್ಯವಾಗಿದೆ ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!