ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಖ್ಯಮಂತ್ರಿಗಳ ಮನೆಯ ಬಳಿ ಹೋದಾಗ ನಮ್ಮನ್ನು ಬಂಧಿಸಬೇಕಿತ್ತು. ಮುಂಚೆಯೇ ಮುಂಜಾಗ್ರತಾ ಕ್ರಮವಾಗಿ ಬಂಧಿಸಿದ್ದು ಸರಿಯಲ್ಲ ಎಂದು ರಾಜ್ಯ ಸರಕಾರ ವಿರುದ್ಧ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಾಗ್ದಾಳಿ ನಡೆಸಿದರು.
ಇಂದು ಬಿಜೆಪಿಯ ಅಹೋರಾತ್ರಿ ಧರಣಿಯಲ್ಲಿ ಪಾಲ್ಗೊಂಡ ಬಳಿಕ ಅವರು ಮಾಧ್ಯಮಗಳ ಜೊತೆ ಮಾತನಾಡಿದರು.
ನಾನು ಮುಖ್ಯಮಂತ್ರಿ ಆಗಿದ್ದಾಗಲೂ ಮುಖ್ಯಮಂತ್ರಿಗಳ ಮನೆಯ ಹತ್ತಿರ ಬಂದಾಗ ಅರೆಸ್ಟ್ ಮಾಡುತ್ತಿದ್ದೆವು. ಇವತ್ತು ಮುಂಜಾಗ್ರತಾ ಕ್ರಮವೆಂದು ಮುಂಚಿತವಾಗಿಯೇ ಬಂಧಿಸಿದ್ದು ಸರಿಯಲ್ಲ. ರಾಜ್ಯದ ಉದ್ದಗಲಕ್ಕೆ ನಮ್ಮ ಹೋರಾಟ ಮುಂದುವರೆಸಲಿದ್ದೇವೆ. ಜನವಿರೋಧಿ ಕಾರ್ಯಕ್ರಮಗಳನ್ನು ಹಿಂದಕ್ಕೆ ಪಡೆಯುವವರೆಗೆ ನಮ್ಮ ಹೋರಾಟ ನಿರಂತರವಾಗಿ ಮುಂದುವರೆಯುತ್ತದೆ ಎಂದು ಹೇಳಿದರು.