ನಮ್ಮ ಸೈನ್ಯಕ್ಕಿದೆ ನಮ್ಮ ಬೆಂಬಲ: ರಾಜ್ಯ ಸರ್ಕಾರದಿಂದ ತಿರಂಗಾ ಯಾತ್ರೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ʻಆಪರೇಷನ್‌ ಸಿಂದೂರ’ ಹೆಸರಿನಲ್ಲಿ ಪಾಕಿಸ್ತಾನ ವಿರುದ್ಧ ಕಾರ್ಯಾಚರಣೆ ನಡೆಸುತ್ತಿರುವ ಭಾರತೀಯ ಸೈನ್ಯಕ್ಕೆ ಬೆಂಬಲ ಸೂಚಿಸಿ ಬೆಂಗಳೂರಿನ ಕೆ.ಆರ್. ವೃತ್ತದಿಂದ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿಯ ಮಿನ್ಸ್ ಸ್ಟೇರ್‌ವರೆಗೆ ‘ತಿರಂಗಾ ಯಾತ್ರೆ’ಯನ್ನು ಕಾಂಗ್ರೆಸ್‌ ಆಯೋಜಿಸಿದ್ದು, ಸಾವಿರಾರು ಸಂಖ್ಯೆಯಲ್ಲಿ ಜನರು ಪಾಲ್ಗೊಂಡಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಇಂದು ನಡೆದ ಯಾತ್ರೆಯಲ್ಲಿ ಎಲ್ಲ ರಾಜಕೀಯ ಪಕ್ಷಗಳ ಮುಖಂಡರು, ಕಾರ್ಯಕರ್ತರು, ಸಾರ್ವಜನಿಕರು, ಸರ್ಕಾರಿ, ಖಾಸಗಿ ಉದ್ದಿಮೆಗಳ ನೌಕರರು, ಸಾಹಿತಿಗಳು, ಚಿಂತಕರು, ಚಿತ್ರರಂಗದವರು, ಸಂಘ-ಸಂಸ್ಥೆಗಳ ಪ್ರತಿನಿಧಿಗಳು ಸೇರಿದಂತೆ ಎಲ್ಲರಿಗೂ ಭಾಗವಹಿಸಲು ಮುಕ್ತ ಆಹ್ವಾನ ನೀಡಲಾಗಿದೆ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾ‌ರ್ ತಿಳಿಸಿದ್ದಾರೆ.

ಆಪರೇಷನ್ ಸಿಂದೂರ್ ಕಾರ್ಯಾಚರಣೆಗೆ ಒಕ್ಕೊರಲಿನ ಬೆಂಬಲ ನೀಡುವ ಸಲುವಾಗಿ ಇಂದು ಆಯೋಜಿಸಿರುವ ‘ತಿರಂಗಾ ರ್‍ಯಾಲಿ’ಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳೋಣ. ದೇಶಕ್ಕಾಗಿ ಹೋರಾಡುತ್ತಿರುವ ಭದ್ರತಾ ಪಡೆಗಳಿಗೆ ಗೌರವ ಸಲ್ಲಿಸೋಣ ಎಂದು ಡಿಸಿಎಂ ಡಿಕೆ ಶಿವಕುಮಾರ್‌ ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!