ದಿಗಂತ ವರದಿ ವಿಜಯಪುರ:
ರಾಜ್ಯದಲ್ಲಿ ವಿಧಾನಸಭೆ ಸಾರ್ವತ್ರಿಕ ಚುನಾವಣೆಗೆ ದಿನಗಣನೆ ಆರಂಭವಾಗಿರುವ ಸಂದರ್ಭ ಬಿಡುಗಡೆಯಾದ ಕಾಂಗ್ರೆಸ್’ನ ಮೊದಲ ಪಟ್ಟಿಯಲ್ಲಿ ನಾಲ್ಕು ಮತಕ್ಷೇತ್ರಕ್ಕೆ ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಿದೆ.
ಜಿಲ್ಲೆಯ ಬಸವನಬಾಗೇವಾಡಿ ಕ್ಷೇತ್ರಕ್ಕೆ ಶಾಸಕ ಶಿವಾನಂದ ಪಾಟೀಲ, ಬಬಲೇಶ್ವರ ಕ್ಷೇತ್ರಕ್ಕೆ ಶಾಸಕ ಎಂ.ಬಿ. ಪಾಟೀಲ, ಇಂಡಿ ಕ್ಷೇತ್ರಕ್ಕೆ ಶಾಸಕ ಯಶವಂತರಾಯಗೌಡ ಪಾಟೀಲ ಹಾಗೂ ಮುದ್ದೇಬಿಹಾಳ ಕ್ಷೇತ್ರಕ್ಕೆ ಮಾಜಿ ಶಾಸಕ ಸಿ.ಎಸ್. (ಅಪ್ಪಾಜಿ) ನಾಡಗೌಡ ಅವರಿಗೆ ಟಿಕೆಟ್ ಘೋಷಿಸಿದೆ.
ಅಲ್ಲದೆ ಇನ್ನುಳಿದ ನಾಲ್ಕು ಮತಕ್ಷೇತ್ರದ ಅಭ್ಯರ್ಥಿಯ ಹೆಸರು ಮಾತ್ರ ಬಾಕಿ ಉಳಿದಂತಾಗಿದೆ.