ಸಾವರ್ಕರ್ ಭಾವಚಿತ್ರ ಅಪಮಾನಕ್ಕೆ ಆಕ್ರೋಶ: ಕಾಂಗ್ರೆಸ್‌ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿ ಕಾರ್ಯಕರ್ತರು

ಹೊಸದಗಿಂತ ವರದಿ, ಹುಬ್ಬಳ್ಳಿ:
ಕಾಂಗ್ರೆಸ್ ಕಾರ್ಯಕರ್ತರು ಎನ್ನಲಾದ ಕೆಲವರು ಧಾರವಾಡದಲ್ಲಿ ವೀರ ಸಾವರ್ಕರ್ ಅವರ ಭಾವಚಿತ್ರ ಹರಿದಿರುವುದನ್ನು ವಿರೋಧಿಸಿ ಶನಿವಾರ ಬಿಜೆಪಿ ಹು-ಧಾ ಮಹಾನಗರ ಜಿಲ್ಲಾ ಘಟಕದಿಂದ ಕಾರವಾರ ರಸ್ತೆಯ ಕಾಂಗ್ರೆಸ್ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಕಾರವಾರ ರಸ್ತೆಯ ಇಎಸ್ಐ ಆಸ್ಪತ್ರೆಯಿಂದ ಬಿಜೆಪಿ ಕಾರ್ಯಕರ್ತರು ಪ್ರತಿಭಟನಾ ಮೆರವಣೆಗೆ ಮಾಡುವ ಮೂಲಕ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಪ್ರಯತ್ನಿಸಿದರು.
ರಸ್ತೆಯಲ್ಲಿ ಪೊಲೀಸರು ಬಿಜೆಪಿ ಪ್ರತಿಭಟನಾ ಕಾರ್ಯಕರ್ತರನ್ನು ತಡೆದು ವಶಪಡಿಸಿಕೊಂಡರು.
ಬಳಿಕ ಕೆಲ ಕಾರ್ಯಕರ್ತರು ಪೊಲೀಸರನ್ನು ತಪ್ಪಿಸಿ ರಸ್ತೆಯಲ್ಲಿ ಕಟ್ಟಿದ್ದ ಕಾಂಗ್ರೆಸ್ ಪಕ್ಷದ ಬಂಟಿಗ್ಸ್ ಹಾಗೂ ಬ್ಯಾನರ್ ಗಳನ್ನು ಹರಿದು ಆಕ್ರೋಶ ವ್ಯಕ್ತಪಡಿಸಿದರು. ಇನ್ನೂ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕುವ ಬಿಜೆಪಿ ಕಾರ್ಯಕರ್ತರು ಪ್ರಯತ್ನಿಸಿದರು. ಈ ಸಂದರ್ಭದಲ್ಲಿ ಎರಡು ಪಕ್ಷದ ಕಾರ್ಯಕರ್ತರ ನಡುವೆ ವಾಗ್ವಾದ ಹಾಗೂ ನೂಕುನುಗ್ಗಲು ನಡೆಯಿತು.
ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಪರಸ್ಪರ ಘೋಷಣೆ ಕೂಗಿದರು. ಈ ಸಂದರ್ಭದಲ್ಲಿ ಪೋಲಿಸ್ ಕಾರ್ಯಕರ್ತರನ್ನು ನಿಯಂತ್ರಿಸಲು ಹರಸಾಹಸ ಪಟ್ಟರು. ನಂತರ ಎರಡು ಪಕ್ಷದವರನ್ನು ನಿಯಂತ್ರಿಸಿದರು. ಬಿಜೆಪಿ ಕಾರ್ಯಕರ್ತರು ವಶಕ್ಕೆ ಪಡೆದರು. ಈ ಸಂದರ್ಭದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!