ಹೊಸದಿಗಂತ ಡಿಜಿಟಲ್ ಡೆಸ್ಕ್
ಜಾರ್ಖಂಡ್ ರಾಜ್ಯದ ಧನ್ಬಾದ್ನಲ್ಲಿ ಇಂದು ಮಧ್ಯಾಹ್ನ ಕಲ್ಲಿದ್ದಲು ಗಣಿಯೊಂದು ಕುಸಿದು ಮಣ್ಣು ಮತ್ತು ಅವಶೇಷಗಳಡಿ 50 ಕ್ಕಿಂತಲೂ ಹೆಚ್ಚಿನ ಜನರು ಸಿಲುಕಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.
ಘಟನೆ ಸಂಭವಿಸಿದ ಕಲ್ಲಿದ್ದಲು ಗಣಿಯಲ್ಲಿ ಅಕ್ರಮ ಗಣಿಗಾರಿಕೆ ನಡೆಯುತ್ತಿತ್ತು ಎಂದು ವರದಿಗಳು ಉಲ್ಲೇಖಿಸಿವೆ. ರಕ್ಷಣಾ ತಂಡಗಳು ಕಾರ್ಮಿಕರ ರಕ್ಷಣೆಗೆ ಕಾರ್ಯಾಚಣೆ ನಡೆಸುತ್ತಿವೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ