ಪ.ಜಾ- ಪ.ಪಂಗಳ ಮೀಸಲಾತಿ ಹೆಚ್ಚಿಸುವ ಐತಿಹಾಸಿಕ ತೀರ್ಮಾನ ಸ್ವಾಗತಾರ್ಹ: ಡಾ. ಅಂಬಾರಾಯ ಅಷ್ಠಗಿ

ಹೊಸ ದಿಗಂತ ವರದಿ, ಕಲಬುರಗಿ:

ರಾಜ್ಯದ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಮೀಸಲಾತಿ ಹೆಚ್ಚಳ ಸಂಬಂಧಿಸಿದಂತೆ ಸರ್ವ ಪಕ್ಷ ಸಭೆಯಲ್ಲಿ ಕಾನೂನು ಮತ್ತು ಸಂವಿಧಾನಾತ್ಮಕವಾಗಿ ಮೀಸಲಾತಿ ಹೆಚ್ಚಿಸುವ ಕುರಿತು ಸರ್ವಸಮ್ಮತ ನಿರ್ಧಾರ ಕೈಗೊಂಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಐತಿಹಾಸಿಕ ತಿರ್ಮಾನವನ್ನು ಕಲಬುರಗಿ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷರು ಆಗಿರುವ, ಬಿಜೆಪಿ ಎಸ್ಸಿ ಮೋರ್ಚಾ ರಾಜ್ಯ ಉಪಾಧ್ಯಕ್ಷ ಡಾ. ಅಂಬಾರಾಯ ಅಷ್ಠಗಿ ಸ್ವಾಗತಿಸಿದ್ದಾರೆ.

ನ್ಯಾ.ನಾಗಮೋಹನ್ ದಾಸ್ ವರದಿ ಪ್ರಕಾರ ಎಸ್.ಸಿ ಸಮುದಾಯಕ್ಕೆ ಶೇ.15 ರಿಂದ ಶೇ.17 ‌ಹಾಗೂ ಎಸ್.ಟಿ ಸಮುದಾಯಕ್ಕೆ ಶೇ.3 ರಿಂದ ಶೇ.7 ಕ್ಕೆ ಹೆಚ್ಚಿಸಲು ನಿರ್ಧರಿಸಲಾಗಿದ್ದು, ಈ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಅಂತಿಮ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದು ಡಾ. ಅಂಬಾರಾಯ ಅಷ್ಠಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!