ಹೊಸದಿಗಂತ ಡಿಜಿಟಲ್ ಡೆಸ್ಕ್:
ಪದ್ಮಶ್ರೀ ಪುರಸ್ಕೃತ, ಜಾನಪದ ಕಲಾವಿದ ‘ಬಳಗಂ’ ಸಿನಿಮಾ ಖ್ಯಾತಿಯ ಮೊಗಿಲಯ್ಯ ನಿಧನರಾಗಿದ್ದಾರೆ. ಕಳೆದ ಕೆಲ ತಿಂಗಳಿನಿಂದ ಕಿಡ್ನಿಗೆ ಸಂಬಂಧಿಸಿದ ಸಮಸ್ಯೆಯಿಂದ ಅವರು ಬಳಲುತ್ತಿದ್ದರು.
ತೆಲುಗಿನ ‘ಬಳಗಂ’ ಸೇರಿದಂತೆ ಪವನ್ ಕಲ್ಯಾಣ್ ನಟನೆಯ ‘ಭೀಮ್ಲಾ ನಾಯಕ್’ ಇನ್ನಿತರೆ ಸಿನಿಮಾಗಳಲ್ಲಿ ಹಾಡು ಹಾಡಿದ್ದರು. ‘ಬಳಗಂ’ ಸಿನಿಮಾದಲ್ಲಿ ಮುಗಿಲಯ್ಯ ಹಾಡಿದ ಹಾಡು ಬಹಳ ಜನಪ್ರಿಯವಾಗಿತ್ತು. ಆ ಹಾಡು ಬಿಡುಗಡೆ ಆದ ಬಳಿಕ ಅವರ ಜನಪ್ರಿಯ ಆಂಧ್ರ ಮತ್ತು ತೆಲಂಗಾಣದಲ್ಲಿ ಬಹಳ ಹೆಚ್ಚಿತ್ತು.
ಮೊಗಿಲಯ್ಯಗೆ ತೆಲಂಗಾಣದಮಾಜಿ ಸಚಿವ ಕೆಟಿಆರ್ ಸೇರಿದಂತೆ ಪವನ್ ಕಲ್ಯಾಣ್, ನಿರ್ಮಾಪಕ ದಿಲ್ ರಾಜು, ಚಿರಂಜೀವಿ ಇನ್ನಿತರರು ಆರ್ಥಿಕ ಸಹಾಯ ಸಹ ಮಾಡಿದ್ದರು. ಮೊಗಿಲಯ್ಯ ಅವರ ಗಾಯನಕ್ಕೆ ರಾಷ್ಟ್ರಪ್ರಶಸ್ತಿ ಬಂದಿದೆ ಜೊತೆಗೆ ಜನಪದ ಕಲೆಗೆ ಅವರ ಸೇವೆ ಗುರುತಿಸಿ ಕೇಂದ್ರ ಸರ್ಕಾರ ಪದ್ಮಶ್ರೀ ಪ್ರಶಸ್ತಿಯನ್ನು ಸಹ ನೀಡಿದೆ.
ಮೊಗಿಲಯ್ಯ ನಿಧನಕ್ಕೆ ಸಚಿವ ಕೆಟಿಆರ್ ಸೇರಿದಂತೆ ಹಲವು ಶ್ರದ್ಧಾಂಜಲಿ ಅರ್ಪಿಸಿದ್ದಾರೆ. ‘ನಿನ್ನ ಹಾಡಿಗೆ ಕರಗದ ಹೃದಯವಿಲ್ಲ, ತೇವಗೊಳ್ಳದ ಕಣ್ಣುಗಳಿಲ್ಲ’ ಎಂದು ಕವಿತೆಯನ್ನೇ ಕೆಟಿಆರ್ ಬರೆದಿದ್ದಾರೆ. ಇನ್ನೂ ಹಲವಾರು ಮಂದಿ ರಾಜಕೀಯ ನಾಯಕರು, ಸಿನಿಮಾ ಮಂದಿ ಮೊಗಿಲಯ್ಯ ನಿಧನಕ್ಕೆ ಕಂಬನಿ ಮಿಡಿದಿದ್ದಾರೆ.