ಪದ್ಮವಿಭೂಷಣ ಪ್ರೊ ಎಂಎಸ್ ವಲಿಯಥಾನ್ ನಿಧನ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ವೈದ್ಯಕೀಯ ಲೋಕದಲ್ಲಿ ಸಾಧನೆಗೈದ ಖ್ಯಾತ ಹೃದಯ ಶಸ್ತ್ರಚಿಕಿತ್ಸಕ, ಪದ್ಮ ವಿಭೂಷಣ ಪ್ರೊ.ಮಾರ್ತಾಂಡ ವರ್ಮ ಶಂಕರನ್ ವಲಿಯಥಾನ್​ ನಿಧನರಾಗಿದ್ದಾರೆ.

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಡಾ.ವಲಿಯಥಾನ್​ ತಡರಾತ್ರಿ 9.14ಕ್ಕೆ ಮಣಿಪಾಲದಲ್ಲಿ ನಿಧನರಾಗಿದ್ದಾರೆ.

ಉಡುಪಿ ಜಿಲ್ಲೆ ಮಣಿಪಾಲದ ಎಮ್‌ಎಎಚ್‌ಇ ಯುನಿವರ್ಸಿಟಿಯ ವಿಶ್ರಾಂತ ಉಪಕುಲಪತಿಯಾಗಿದ್ದ ಡಾ.ವಲಿಯಥಾನ್ ಅವರು ಭಾರತೀಯ ವೈದ್ಯಕೀಯ ಸಂಘದಿಂದ ಜೀವಮಾನ ಸಾಧನೆ ಪ್ರಶಸ್ತಿ ಪಡೆದಿದ್ದರು. ಹೃದಯ ಶಸ್ತ್ರಚಿಕಿತ್ಸೆ ಮತ್ತು ವೈದ್ಯಕೀಯ ತಂತ್ರಜ್ಞಾನಕ್ಕೆ ಗಮನಾರ್ಹ ಕೊಡುಗೆ ನೀಡಿದ್ದರು.

ಡಾ.ವಲಿಯಥಾನ್ ಅವರಿಗೆ 2005ರಲ್ಲಿ ಪದ್ಮವಿಭೂಷಣ, 2002ರಲ್ಲಿ ಪದ್ಮಶ್ರೀ, ಡಾ.ಬಿ.ಸಿ ರಾಯ್ ರಾಷ್ಟ್ರೀಯ ಪ್ರಶಸ್ತಿ ಸಿಕ್ಕಿದೆ. ಅಲ್ಲದೆ ಇಂಗ್ಲೆಂಡ್‌ನ ರಾಯಲ್ ಕಾಲೇಜ್ ಆಫ್ ಸರ್ಜನ್ಸ್‌ನ ಹಂಟೇರಿಯನ್ ಪ್ರೊಫೆಸರ್‌ ಶಿಪ್, ಫ್ರೆಂಚ್ ಸರ್ಕಾರದಿಂದ ಚೆವಲಿಯರ್ ಆಫ್ ದಿ ಆರ್ಡರ್ ಆಫ್ ಪಾಮ್ಸ್ ಅಕಾಡೆಮಿಕ್ಸ್, ಜಾನ್ಸ್ ಹಾಪ್ಕಿನ್ಸ್ ವಿಶ್ವವಿದ್ಯಾಲಯದಿಂದ ಡಾ. ಸ್ಯಾಮ್ಯುಯೆಲ್ ಪಿ. ಆಸ್ಪರ್ ಪ್ರಶಸ್ತಿ, ಭಾರತೀಯ ವೈದ್ಯಕೀಯ ಸಂಘದಿಂದ ಜೀವಮಾನ ಸಾಧನೆ ಪ್ರಶಸ್ತಿ ಕೂಡ ಸಿಕ್ಕಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!