ಹೊಸದಿಗಂತ ಡಿಜಿಟಲ್ ಡೆಸ್ಕ್ :
ಕರ್ನಾಟಕದಲ್ಲಿ ಪ್ರಜಾಪ್ರಭುತ್ವದ ಹಬ್ಬ ಚುನಾವಣೆಗೆ ಇನ್ನೇನು ಕೆಲವೇ ದಿನಗಳು ಬಾಕಿ ಇದೆ. ಇಂತಹ ಹಬ್ಬದ ದಿನ ಮೂರು ಲಕ್ಷ ಕಾರ್ಮಿಕರು ಮತದಾನದಿಂದ ವಂಚಿತರಾಗ್ತಿದ್ರು. ಈಗ ಅವ್ರಿಗೆಲ್ಲ ಖುಷಿ ಸುದ್ದಿಯೊಂದು ಹೊರಬಿದ್ದಿದೆ. ಮತದಾನದ ದಿನ ಗಾರ್ಮೆಂಟ್ಸ್ ನೌಕರರಿಗೆ, ಕಾರ್ಮಿಕರಿಗೆಲ್ಲ ಸಂಬಳ ಸಹಿತ ರಜೆ ನೀಡಲು ನಿರ್ಧರಿಸಲಾಗಿದೆ. ಇದೇ ಮೇ 10ರಂದು ರಾಜ್ಯ ವಿಧಾನ ಸಭಾ ಚುನಾವಣೆ ನಡೆಯಲಿದ್ದು ಈ ದಿನ ಕಾರ್ಮಿಕರಿಗೆ ರಜೆ ಘೋಷಿಸಲಾಗಿದೆ.
ಮತದಾನ ಅಂತ ಡ್ಯೂಟಿ ಮಿಸ್ ಮಾಡಿದ್ರೆ ಸಂಬಳ ಕಟ್ ಮಾಡ್ತಾರೆ ಅಂತ ವೋಟ್ ಮಾಡ್ದೆ ಕೆಲ್ಸಕ್ಕೆ ಹಾಜರಾಗ್ತಿದ್ದಾರೆ ಬೆಂಗಳೂರಿಗರು. ಹೀಗಾಗಿ ಮತದಾನದ ದಿನ ಎಲ್ಲ್ಲ ಕೈಗಾರಿಕೆಗಳಲ್ಲಿ ಕಾರ್ಮಿಕರಿಗೆ, ಗಾರ್ಮೆಂಟ್ಸ್ ನೌಕರರಿಗೆ ಸಂಬಳ ಸಹಿತ ರಜೆ ಘೋಷಿಸಲಾಗಿದೆ. ಆದರೆ ಮತದಾನ ಮಾಡದವರಿಗೆ ಸಂಬಳ ಸಹಿತ ರಜೆ ಪಡೆಯುವ ಹಕ್ಕು ಇರುವುದಿಲ್ಲ.
ಬೆಂಗಳೂರಿನಲ್ಲಿ ಮತದಾನದ ಪ್ರಮಾಣ ಶೇ.50ಕ್ಕಿಂತಲೂ ಕಡಿಮೆ ಇರುತ್ತದೆ. ಹೀಗಾಗೇ ಇದನ್ನ ತಪ್ಪಿಸಲು ವಾರದ ಮಧ್ಯೆ ಮತದಾನದ ದಿನಾಂಕ ನಿಗದಿಪಡಿಸಲಾಗಿದೆ. ಆದ್ರೆ ಗಾರ್ಮೆಂಟ್ಸ್ ಸಿಬ್ಬಂದಿ ಮತ್ತು ಕಾರ್ಮಿಕರು ಮತದಾನಕ್ಕೆ ಗೈರಾಗುವ ಆತಂಕ ಎದುರಾಗಿದೆ. ಹೀಗಾಗಿ ಈ ಬಾರಿ ಬೆಂಗಳೂರು ಜಿಲ್ಲಾ ಚುನಾವಣಾಧಿಕಾರಿ, ಪ್ರತಿ ಐಟಿ ಬಿಟಿ ಹಾಗೂ ಗಾರ್ಮೆಂಟ್ಸ್ಗೆ ಭೇಟಿ ನೀಡಿ ಮತದಾನ ಮಾಡಲು ಮನವಿ ಮಾಡ್ತಿದ್ದಾರೆ. ಈ ವೇಳೆ ಗಾರ್ಮೆಂಟ್ಸ್ ಸಿಬ್ಬಂದಿ ಮತಹಾಕಲು ಊರಿಗೆ ಹೋದ್ರೆ, ಸಂಬಳ ಕಡಿತವಾಗುವ ಆತಂಕವನ್ನ ವ್ಯಕ್ತಿಪಡಿಸಿದ್ರು. ಇದ್ರಿಂದಾಗಿ ಗಾರ್ಮೆಂಟ್ಸ್ ಕಂಪನಿಗಳಿಗೆ ಸಂಬಳ ಸಹಿತ ರಜೆ ನೀಡುವಂತೆ ಸೂಚನೆ ಕೊಟ್ಟಿದ್ದಾರೆ.