ಹೊಸದಿಗಂತ ಡಿಜಿಟಲ್ ಡೆಸ್ಕ್:
ಟಿ-20 ವಿಶ್ವಕಪ್ನ ಸೆಮಿಫೈನಲ್ನಲ್ಲಿ ಭಾರತ ಹೀನಾಯ ಸೋಲು ಅನುಭವಿಸಿದ್ದು, ಈ ಮೂಲಕ ಟೂರ್ನಿಯಿಂದ ಹೊರನಡೆದಿದೆ.
ಇದೀಗ ತಂಡದ ಆಟಗಾರ ಹಾರ್ದಿಕ್ ಪಾಂಡ್ಯ ಭಾವನಾತ್ಮಕ ಸಂದೇಶದ ಮೂಲಕ ಟ್ವೀಟ್ ಮಾಡಿ ಬೆಂಬಲಿಸಿದ ಎಲ್ಲರಿಗೂ ಧನ್ಯವಾದ ತಿಳಿಸಿದ್ದಾರೆ.
‘ಕನಸು ಈಡೇರದೇ ಇದ್ದಾಗ ನೋವಾಗುವುದು ಸಹಜ. ನಮ್ಮೆಲ್ಲರ ಕನಸು ಧ್ವಂಸವಾದಂತಾಗಿದೆ. ಈವರೆಗೂ ನಾವೆಲ್ಲರೂ ಒಂದು ತಂಡವಾಗಿ ಆಡಿದ್ದೇವೆ. ಇದನ್ನು ನಾನು ಆನಂದಿಸಿದ್ದೇನೆ. ಸೆಮಿಫೈನಲ್ವರೆಗೂ ಪ್ರತೀ ಹಂತದಲ್ಲೂ ಕಠಿಣ ಪರಿಶ್ರಮದೊಂದಿಗೆ ಪರಸ್ಪರ ಹೋರಾಡಿದ್ದೇವೆ. ತಿಂಗಳುಗಳಿಂದ ನಮ್ಮನ್ನು ಬೆಂಬಲಿಸಿದವರಿಗೆ ಹಾಗೂ ನಮ್ಮ ಸಿಬ್ಬಂದಿ ವರ್ಗಕ್ಕೆ ಧನ್ಯವಾದಗಳು’ ಎಂದು ಟ್ವೀಟ್ ಮಾಡಿದ್ದಾರೆ.
Devastated, gutted, hurt. Tough to take, for all of us. To my teammates, I’ve enjoyed the bond that we built – we fought for each other every step of the way. Thank you to our support staff for their endless dedication and hardwork for months on end. pic.twitter.com/HlVUC8BNq7
— hardik pandya (@hardikpandya7) November 10, 2022
ಹಾರ್ದಿಕ್ ಪಾಂಡ್ಯಾ ಟಿ-20 ವಿಶ್ವಕಪ್ ಪಂದ್ಯದುದ್ದಕ್ಕೂ ಉತ್ತಮ ಫಾರ್ಮ್ ನಲ್ಲಿದ್ದರು. ಸೆಮಿಫೈನಲ್ ಪಂದ್ಯದಲ್ಲೂ ಅರ್ಧಶತಕ ಸಿಡಿಸಿ ಮಿಂಚಿದ್ದರು.