ಪಾಕ್-ಭಾರತ ಯುದ್ಧದ ಕಾರ್ಮೋಡ: ಮೂರು ಸೇನೆಗಳ ಮುಖ್ಯಸ್ಥರೊಂದಿಗೆ ಪ್ರಧಾನಿ ಮೋದಿ ಸಭೆ

ಹೊಸದಿಗಂತ ಡಿಜಿಟಲ್ ಡೆಸ್ಕ್: 

ದೇಶಗಳ ನಡುವೆ ಉದ್ಭವಿಸಿರುವ ಸಂಘರ್ಷದ ಪರಿಸ್ಥಿತಿಯನ್ನು ಅವಲೋಕಿಸಲು ಪ್ರಧಾನಿ ನರೇಂದ್ರ ಮೋದಿಹೊಸದಿಲ್ಲಿಯಲ್ಲಿ ಮೇ 9ರಂದು ಮೂರೂ ಸೇನಾ ಮುಖ್ಯಸ್ಥರೊಂದಿಗೆ ಸಮಾಲೋಚನೆ ನಡೆಸಿದರು.

ಏ. 22ರಂದು ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಉಗ್ರರು ದಾಳಿ ನಡೆಸಿ 26 ಮಂದಿಯನ್ನು ಹತ್ಯೆಗೈದಿದ್ದರು. ಇದರ ವಿರುದ್ಧ ಪ್ರತೀಕಾರ ತೀರಿಸಿಕೊಂಡ ಭಾರತ ಮೇ 7ರಂದು ಪಾಕ್‌ನ ಉಗ್ರ ನೆಲೆಯ ಮೇಲೆ ದಾಳಿ ನಡೆಸಿತು. ಭಯೋತ್ಪಾದಕರನ್ನು ಮಾತ್ರ ಗುರಿಯಾಗಿಸಿಕೊಂಡು ಕಾರ್ಯಾಚರಣೆ ನಡೆಸಲಾಗಿದೆ ಎಂದು ಭಾರತ ಸ್ಪಷ್ಟನೆಯನ್ನೂ ನೀಡಿತು. ಆದರೆ ಆದಾದ ಬಳಿಕ ಪಾಕ್‌ ಕದನ ವಿರಾಮ ಉಲ್ಲಂಘಿಸಿ ಭಾರತದ ಹಲವು ನಗರಗಳ ಮೇಲೆ ಪ್ರತಿದಾಳಿ ನಡೆಸಿತು. ಇದನ್ನು ಭಾರತೀಯ ಸೇನೆ ದಿಟ್ಟವಾಗಿ ಮಟ್ಟ ಹಾಕಿತು. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಸದ್ಯದ ಸ್ಥಿತಿಯನ್ನು ಅವಲೋಕಿಸಿದರು.

ನರೇಂದ್ರ ಮೋದಿ ಅವರ ಅದಿಕೃತ ನಿವಾಸದಲ್ಲಿ ನಡೆದ ಈ ಸಭೆಯಲ್ಲಿ ನೆಲ, ಜಲ, ವಾಯು ಸೇನೆಯ ಮುಖ್ಯಸ್ಥರು ಭಾಗವಹಿಸಿದರು. ಜತೆಗೆ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌, ಭದ್ರತಾ ಸಲಹೆಗಾರ ಅಜಿತ್‌ ದೋವಲ್‌ ಮತ್ತಿತರರು ಉಪಸ್ಥಿತರಿದ್ದರು.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!