ಏನೋ ಮಾಡೋಕೆ ಹೋಗಿ, ತಮ್ಮ ತಲೆ ಮೇಲೆ ತಾವೇ ಚಪ್ಪಡಿ ಕಲ್ಲು ಎಳೆದುಕೊಂಡ ಪಾಕ್!!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪಾಕಿಸ್ತಾನ ತಾವಾಗಿಯೇ ತೆಗೆದುಕೊಂಡ ನಿರ್ಧಾರ ತಮಗೇ ಉಲ್ಟಾ ಹೊಡೆಯುವ ಎಲ್ಲಾ ಲಕ್ಷಣಗಳು ಗೋಚರಿಸುತ್ತಿವೆ. ಪಾಕಿಸ್ತಾನ ಕೇವಲ ನೀರಿಗಾಗಿ ಅಲ್ಲ, ಔಷಧಿಗಾಗಿಯೂ ಹಾತೊರೆಯುವ ಸಾಧ್ಯತೆ ಹೆಚ್ಚಿದೆ.

ಪಹಲ್ಗಾಮ್ ಭಯೋತ್ಪಾದನಾ ದಾಳಿ ಬಳಿಕ ಪಾಕಿಸ್ತಾನದ ಮೇಲೆ ರಾಜತಾಂತ್ರಿಕ ಅಸ್ತ್ರ ಪ್ರಯೋಗಿಸಿರುವ ಕೇಂದ್ರ ಸರ್ಕಾರ, ಭಾರತದಿಂದ ನೆರೆಯ ರಾಷ್ಟ್ರಕ್ಕೆ ಒಂದು ಹನಿ ನೀರನ್ನೂ ಹರಿಸದಿರಲು ಪ್ರತಿಜ್ಞೆ ಮಾಡಿದೆ. ಇದಕ್ಕೆ ಪ್ರತಿಯಾಗಿ ಪಾಕಿಸ್ತಾನವೂ ಭಾರತೊಂದಿಗಿನ ಎಲ್ಲಾ ವ್ಯಾಪಾರ ಸಂಬಂಧವನ್ನು ಕಡಿತಗೊಳಿಸಿದೆ.

ಆದರೆ ಈಗ ಪಾಕ್ ತೆಗೆದುಕೊಂಡ ನಿರ್ಧಾರ ಅವರಿಗೇ ಮುಳುವಾಗುವಂತಾ ಲಕ್ಷಣಗಳು ಕಾಣಿಸುತ್ತಿದೆ. ಪಾಕಿಸ್ತಾನದ ಔಷಧ ನಿಯಂತ್ರಣ ಪ್ರಾಧಿಕಾರ ಔಷಧ ಕ್ಷೇತ್ರದ ಮೇಲಿನ ನಿರ್ಬಂಧಗಳ ಪರಿಣಾಮದ ಕುರಿತು ಯಾವುದೇ ಅಧಿಸೂಚನೆಯನ್ನು ಹೊರಡಿಸಿಲ್ಲ. ಆದರೆ ಔಷಧಿಗಳ ಕೊರತೆ ಉಂಟಾಗದಂತೆ ಕ್ರಮಗಳನ್ನು ಜಾರಿಗೆ ತರಲಾಗಿದೆ.

ವ್ಯವಹಾರ ಸ್ಥಗಿತಗೊಂಡಿರುವ ಪರಿಣಾಮಗಳನ್ನು ಎದುರಿಸಲು ಕ್ರಮಗಳನ್ನು ತೆಗೆದುಕೊಳ್ಳದಿದ್ದರೆ, ದೊಡ್ಡ ಸಮಸ್ಯೆ ಎದುರಾಗಬಹುದು ಎಂದು ಆರೋಗ್ಯ ತಜ್ಞರು ಎಚ್ಚರಿಸಿದ್ದಾರೆ.

ಪೂರೈಕೆ ಸರಪಳಿಯಲ್ಲಿನ ಅಡಚಣೆಯಿಂದಾಗಿ ತೀವ್ರ ಕೊರತೆ ಉಂಟಾಗಬಹುದು ಎಂದು ಹೇಳಲಾಗಿದೆ. ಔಷಧಿಗಳಿಗೆ ಬೇಕಾಗುವ ಕಚ್ಚಾ ವಸ್ತುಗಳ ಶೇಕಡಾ 30 ರಿಂದ 40 ರಷ್ಟು ಭಾರತದಿಂದ ಬರುತ್ತವೆ.

 

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!