ಅಯೋಧ್ಯೆ ರಾಮ ಮಂದಿರ ಮೇಲೆ ದಾಳಿಗೆ ಜೈಷ್-ಎ-ಮೊಹಮ್ಮದ್ ಸಂಚು: ಮಾಧ್ಯಮ ವರದಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್: 

ಭಾರತದ ವಿರುದ್ಧ ಪಾಕಿಸ್ತಾನದ ಷಡ್ಯಂತ್ರಗಳು ಮುಂದುವರಿದಿವೆ. ಪಾಕಿಸ್ತಾನವು ಭಯೋತ್ಪಾದಕ ಸಂಘಟನೆಗಳ ಮೂಲಕ ಭಾರತದಲ್ಲಿ ವಿಧ್ವಂಸಕತೆಯನ್ನು ಸೃಷ್ಟಿಸಲು ಪ್ರಯತ್ನಿಸುತ್ತಿದೆ. ಇತ್ತೀಚೆಗೆ ಮತ್ತೊಂದು ಪಾಕಿಸ್ತಾನಿ ಭಯೋತ್ಪಾದಕ ಸಂಘಟನೆಯ ಸಂಚು ಬೆಳಕಿಗೆ ಬಂದಿದೆ.

ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ರಾಮಮಂದಿರದ ಮೇಲೆ ಪಾಕಿಸ್ತಾನದ ಭಯೋತ್ಪಾದಕ ಸಂಘಟನೆ ಜೈಶ್-ಎ-ಮೊಹಮ್ಮದ್ ದಾಳಿಗೆ ಯತ್ನಿಸುತ್ತಿರುವುದಾಗಿ ಎಬಿಪಿ ವರದಿ ಮಾಡಿದೆ. ಆತ್ಮಾಹುತಿ ದಾಳಿಯ ಮೂಲಕ ಜನವರಿ 26ಗಣರಾಜ್ಯೋತ್ಸವದಂದು ಅಯೋಧ್ಯೆ ರಾಮಮಂದಿರವನ್ನು ಧ್ವಂಸಗೊಳಿಸಲು ಜೈಶ್-ಎ-ಮೊಹಮ್ಮದ್ ಪ್ರಯತ್ನಿಸುತ್ತಿದೆ. ಈ ಸಂಘಟನೆಯು ಇನ್ನೂ ಭಯೋತ್ಪಾದಕರನ್ನು ಕಳುಹಿಸಲು ಪ್ರಯತ್ನಿಸುತ್ತಿದೆ ಎಂದು ವರದಿ ತಿಳಿಸಿದೆ.

ನೇಪಾಳದ ಮೂಲಕ ವಿಶೇಷ ಆತ್ಮಹತ್ಯಾ ದಳವನ್ನು ಭಾರತಕ್ಕೆ ಕಳುಹಿಸಲು ಪ್ರಯತ್ನಿಸಿದ್ದು, ಶಸ್ತ್ರಾಸ್ತ್ರಗಳನ್ನು ಕಳ್ಳಸಾಗಣೆ ಮಾಡಲು ಯತ್ನಿಸಿದ್ದಾರೆ. ಅಯೋಧ್ಯೆ ದೇಗುಲದ ಮೇಲೆ ದಾಳಿ ನಡೆಸುವ ಮೂಲಕ ದೇಶದಲ್ಲಿ ಹಿಂದೂ-ಮುಸ್ಲಿಂ ನಡುವೆ ಕಂದಕ ಸೃಷ್ಟಿಸಿ ಕೋಮುದ್ವೇಷ ಕೆರಳಿಸುವುದೇ ಭಯೋತ್ಪಾದಕ ಸಂಘಟನೆಯ ತಂತ್ರವಾಗಿರುವಂತಿದೆ. ಆರ್ಟಿಕಲ್ 370 ರದ್ದತಿಗೆ ಪ್ರತೀಕಾರವಾಗಿ ಜೈಶ್-ಎ-ಮೊಹಮ್ಮದ್ ಈ ದಾಳಿಗಳನ್ನು ನಡೆಸಲು ನಿರ್ಧರಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!