ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಘಟನೆಗಳಿಗೆ ಪಾಕಿಸ್ತಾನ- ಉಗ್ರವಾದವೇ ಕಾರಣ: ಗುಲಾಂ ನಬಿ ಆಜಾದ್

ಹೊಸದಿಗಂತ ಡಿಜಿಟಲ್‌ ಡೆಸ್ಕ್‌

ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಘಟನೆಗಳಿಗೆ ಪಾಕಿಸ್ತಾನ ಮತ್ತು ಉಗ್ರವಾದವೇ ಕಾರಣ ಎಂದು ಹಿರಿಯ ಕಾಂಗ್ರೆಸ್ ನಾಯಕ ಗುಲಾಂ ನಬಿ ಆಜಾದ್ ಹೇಳಿದ್ದಾರೆ.
ಜಮ್ಮುವಿನಲ್ಲಿ ಮಾತನಾಡಿದ ಅವರು, ಮಹಾತ್ಮ ಗಾಂಧಿ ಅವರು ದೊಡ್ಡ ಹಿಂದು ಮತ್ತು ಜಾತ್ಯಾತೀತವಾದಿ ಎಂದು ನಾನು ನಂಬುತ್ತೇನೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಈ ಹಿಂದೆ ನಡೆದಿರುವುದಕ್ಕೆ ಪಾಕಿಸ್ತಾನ ಮತ್ತು ಭಯೋತ್ಪಾದನೆ ಕಾರಣ.
ಪಾಕಿಸ್ತಾನ ಮತ್ತು ಭಯೋತ್ಪಾದನೆ ಎಲ್ಲಾ ಹಿಂದೂಗಳು, ಕಾಶ್ಮೀರಿ ಪಂಡಿತರು, ಕಾಶ್ಮೀರಿ ಮುಸ್ಲಿಮರು, ಡೋಗ್ರಾಗಳ ಮೇಲೆ ಪರಿಣಾಮ ಬೀರಿದೆ ಎಂದು 1990ರ ಕಾಶ್ಮೀರಿ ಪಂಡಿತರ ಸ್ಥಳಾಂತರ ವಿಚಾರಕ್ಕೆ ಸಂಬಂಧಿಸಿದಂತೆ ಗುಲಾಂ ನಬಿ ಆಜಾದ್ ಸ್ಪಷ್ಟನೆ ನೀಡಿದ್ದಾರೆ.
ಕಾಂಗ್ರೆಸ್ ಸಹಿತ ಎಲ್ಲಾ ರಾಜಕೀಯ ಪಕ್ಷಗಳು ಧರ್ಮ, ಜಾತಿ ಮತ್ತು ಇತರ ವಿಷಯಗಳ ಆಧಾರದ ಮೇಲೆ ಎಲ್ಲಾ ಸಮಯದಲ್ಲಿಯೂ ಜನರನ್ನು ವಿಭಜಿಸಬಹುದು. ನಾಗರಿಕ ಸಮಾಜವು ಒಟ್ಟಾಗಿ ಇರಬೇಕು. ಜಾತಿ, ಧರ್ಮವನ್ನು ಲೆಕ್ಕಿಸದೆ ಎಲ್ಲರಿಗೂ ನ್ಯಾಯ ನೀಡಬೇಕು ಎಂದು ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!