ಹೊಸದಿಗಂತ ಡಿಜಿಟಲ್ ಡೆಸ್ಕ್:
2025 ರೊಳಗೆ ಪಾಕ್ ಆಕ್ರಮಿತ ಕಾಶ್ಮೀರ (POK)ಭಾರತದೊಂದಿಗೆ ವಿಲೀನಗೊಳ್ಳಲಿದೆ ಎಂದು ಪ್ರಸಿದ್ಧ ಜ್ಯೋತಿಷಿ ರುದ್ರ ಕರಣ್ ಪ್ರತಾಪ್ (Rudra Karan Partaap) ಭವಿಷ್ಯ ನುಡಿದಿದ್ದಾರೆ.
ಈ ಕುರಿತು ಎಕ್ಸ್ನಲ್ಲಿ ಪೋಸ್ಟ್ ಹಾಕಿರುವ ಅವರು, ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಪ್ರಧಾನಿ ಮೋದಿಯವರು ಸದ್ಯಕ್ಕೆ ಮಂಗಳ ಮಹಾದಶಾ ನಡೆಸುತ್ತಿದ್ದಾರೆ. ಈ ಅವಧಿಯಲ್ಲಿ ಭೂಮಿಗೆ ಸಂಬಂಧಿಸಿದ ವಿಷಯಗಳು ಗಮನಾರ್ಹವಾದ ಗಮನವನ್ನು ನೀಡುತ್ತವೆ ಎಂದು ಊಹಿಸಲಾಗಿದೆ. ಪಾಕ್ ಆಕ್ರಮಿತ ಕಾಶ್ಮೀರ (ಪಿಒಕೆ) 2025 ರ ಏಪ್ರಿಲ್ನಿಂದ ಸೆಪ್ಟೆಂಬರ್ ಒಳಗೆ ಭಾರತದೊಂದಿಗೆ ವಿಲೀನಗೊಳ್ಳಲಿದೆ ಎಂದು ಹೇಳಿದ್ದಾರೆ.
Astrologically, Prime Minister Modi is currently going through his Mars Mahadasha. It is speculated that land-related matters will be a significant focus during this period. Pakistan-occupied Kashmir (POK), might potentially be integrated into India between April 2025 – September… pic.twitter.com/OgsewOFrzF
— Rudra Karan Partaap🇮🇳 (@Karanpartap01) April 6, 2024
ಪ್ರಧಾನಿ ಮೋದಿ ಅವರು 2024 ರಲ್ಲಿ ಮತ್ತೊಂದು ಅವಧಿಗೆ ಅಧಿಕಾರ ನಡೆಸುವುದು ಸ್ಪಷ್ಟ. ಲೋಕಸಭಾ ಚುನಾವಣೆಯಲ್ಲಿ ಮೋದಿ ನೇತೃತ್ವದ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ಭವಿಷ್ಯ ನುಡಿದಿದ್ದಾರೆ.
ಈ ಹಿಂದೆ 2022 ರ ಮಾರ್ಚ್ ತಿಂಗಳಲ್ಲಿ ದೆಹಲಿಯ ಮುಖ್ಯಮಂತ್ರಿ ಕೇಜ್ರಿವಾಲ್ ಅವರು 2024 ಮಾರ್ಚ್ನಿಂದ ಗಮನಾರ್ಹ ಹಿನ್ನಡೆ ಎದುರಿಸಬಹುದು ಎಂದು ರುದ್ರ ಅವರು ಎಕ್ಸ್ನಲ್ಲಿ ಪೋಸ್ಟ್ ಹಾಕಿದ್ದರು. ಈ ಭವಿಷ್ಯವು ನಿಖರವಾದಂತೆ ತೋರಿದೆ. ಏಕೆಂದರೆ, ಜಾರಿ ನಿರ್ದೇಶನಾಲಯವು ಮಾರ್ಚ್ 21 ರಂದು ಕೇಜ್ರಿವಾಲ್ ಅವರನ್ನು ಭ್ರಷ್ಟಾಚಾರ ಮತ್ತು ಅಕ್ರಮ ಹಣ ವರ್ಗಾವಣೆ ಆರೋಪದ ಮೇಲೆ ಬಂಧಿಸಿದೆ.