ಹೊಸದಿಗಂತ ಡಿಜಿಟಲ್ ಡೆಸ್ಕ್;
ಪಹಲ್ಗಾಮ್ ದಾಳಿಯ ನಂತರ ಅಟ್ಟಾರಿ ವಾಘಾ ಬಾರ್ಡರ್ ರೋಡನ್ನು ಮುಚ್ಚಿದೆ. ಜೊತೆಗೆ ಭಾರತದಲ್ಲಿರುವ ಎಲ್ಲಾ ಪಾಕಿಸ್ತಾನಿಗಳಿಗೆ ದೇಶ ಬಿಟ್ಟು ಹೋಗುವಂತೆ ಕೇಂದ್ರ ಸರಕಾರ ಆದೇಶ ನೀಡಿದೆ.
ಹೀಗಾಗಿ ಅನೇಕರು ಜನರು ಪಾಕ್ ನತ್ತ ,ಅತ್ತೆ ಮುಖ ಮಾಡಿದ್ದು , ಈ ರೀತಿ ಹೊರಟಭಾರತದಿಂದ ಬಂದ ತನ್ನ ಪ್ರಜೆಗಳನ್ನು ತನ್ನ ದೇಶದೊಳಗೆ ಬಿಟ್ಟುಕೊಳ್ಳದೇ ಆ ಕಡೆಯ ಗೇಟನ್ನು ಪಾಕಿಸ್ತಾನ ಬಂದ್ ಮಾಡಿದೆ ಎಂದು ವರದಿಯಾಗಿದೆ.
ಪಾಕಿಸ್ತಾನವು ಇಂದು ಬೆಳಗ್ಗೆ 8:00 ಗಂಟೆಯಿಂದ ತನ್ನ ಪ್ರಜೆಗಳನ್ನು ಒಳಗೆ ಬಿಟ್ಟುಕೊಳ್ಳುವ ಕೌಂಟರ್ಗಳನ್ನು ಮುಚ್ಚಿದೆ ಎಂದು ಭಾರತೀಯ ವಲಸೆ ಅಧಿಕಾರಿಗಳು ದೃಢಪಡಿಸಿದ್ದಾರೆ, ಇದರಿಂದಾಗಿ ನೂರಾರು ಪಾಕಿಸ್ತಾನಿ ಪ್ರಜೆಗಳು ಗಡಿಯಲ್ಲಿಯೇ ಸಿಲುಕಿಕೊಂಡಿದ್ದಾರೆ.
ಹಿರಿಯ ನಾಗರಿಕರು, ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಪಾಕಿಸ್ತಾನಿ ನಾಗರಿಕರು ಈಗ ಯಾವುದೇ ಆಶ್ರಯ, ಆಹಾರ ಅಥವಾ ಅವರ ಸ್ಥಿತಿಯ ಬಗ್ಗೆ ಸ್ಪಷ್ಟತೆ ಇಲ್ಲದೆ ಸಂಕಷ್ಟದಲ್ಲಿ ಸಿಲುಕಿದ್ದಾರೆ ಎಂದು ಮೂಲಗಳು ವರದಿ ಮಾಡಿವೆ. ತನ್ನದೇ ಪ್ರಜೆಗಳ ಒಳಗೆ ಸೇರಿಸಿಕೊಳ್ಳದೇ ಪಾಕಿಸ್ತಾನದ ಈ ಹಠಾತ್ ವರ್ತನೆಯಿಂದ ಅಟ್ಟಾರಿ ಪೋಸ್ಟ್ನಲ್ಲಿ ಆತಂಕ ಸೃಷ್ಟಿಯಾಗಿದ್ದು, ಭದ್ರತೆಯನ್ನು ಹೆಚ್ಚಿಸಲಾಗಿದೆ.