ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತೀಯ ರಕ್ಷಣಾ ಪಡೆಗಳ ದಾಳಿಗೆ ತತ್ತರಿಸಿರುವ ಪಾಕಿಸ್ತಾನ ಯೋಧರನ್ನು ಎದುರಿಸಲಾಗದೇ ಅಮಾಯಕ ಜನರನ್ನು ಟಾರ್ಗೆಟ್ ಮಾಡುತ್ತಿದೆ.
ಗಡಿ ಜಿಲ್ಲೆಗಳಾದ ಜಮ್ಮು ಮತ್ತು ಕಾಶ್ಮೀರ, ಪಂಜಾಬ್, ರಾಜಸ್ಥಾನ, ಹರಿಯಾಣ ಹಾಗೂ ಹಿಮಾಚಲ ಪ್ರದೇಶದಲ್ಲಿ ತುರ್ತು ಪರಿಸ್ಥಿತಿ ಹೇರಲಾಗಿದೆ. ಜಮ್ಮು ಕಾಶ್ಮೀರದಲ್ಲಿ ಬೆಳಗ್ಗಿನವರೆಗೂ ಬ್ಲಾಕ್ಔಟ್ ಘೋಷಿಸಲಾಗಿತ್ತು.
ಭಾರತ ಮತ್ತು ಪಾಕ್ ನಡುವೆ ಉದ್ವಿಗ್ನತೆ ಹೆಚ್ಚಿದ ಬೆನ್ನಲ್ಲೇ ಗಡಿ ಗ್ರಾಮಗಳಿಂದ ಸುಮಾರು 10,000 ನಿವಾಸಿಗಳನ್ನು ಸ್ಥಳಾಂತರಿಸುವ ಕಾರ್ಯ ನಡೆಯುತ್ತಿದೆ. ಈ ಹೊತ್ತಿನಲ್ಲೇ ಪಾಕ್ ಅಮಾಯಕರನ್ನ ಗುರಿಯಾಗಿಸಿ ಶೆಲ್ ದಾಳಿ ನಡೆಸಿದೆ. ಪಾಕ್ ದಾಳಿಯಿಂದ ಪೂಂಚ್ ಜಿಲ್ಲೆ ಮಾತ್ರವಲ್ಲದೆ, ಉರಿ, ಬಾರಾಮುಲ್ಲಾ, ಕರ್ನಾ, ತಂಗ್ಧರ್, ಮೆಂಧರ್ ಸೇರಿದಂತೆ ವಿವಿಧೆಡೆ ನಾಗರಿಕರ ಮನೆ ಮಳಿಗೆಗಳು ಹಾನಿಗೊಳಗಾಗಿವೆ.
#WATCH | Damaged walls, broken windows, debris on the ground after Pakistan targets civilian areas along LoC in Jammu & Kashmir
(Visuals deferred by unspecified time) pic.twitter.com/Df1HlESdaq
— ANI (@ANI) May 9, 2025