ಸುವರ್ಣಸೌಧದತ್ತ ಪಂಚಮಸಾಲಿ ಸಮಾಜದ ಪಾದಯಾತ್ರೆ: ಪ್ರತಿಭಟನೆಗೆ ಸಜ್ಜು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಚಳಿಗಾಲದ ಅಧಿವೇಶನದ ಎರಡನೇ ದಿನದಂದು ಸಾಲು ಸಾಲು ಪ್ರತಿಭಟನೆ ನಡೆಯುವ ಸಾಧ್ಯತೆ ಹೆಚ್ಚಿದೆ.
ರಾಜ್ಯದ ಎಲ್ಲೆಡೆಯಿಂದ ಪ್ರತಿಭಟನಾಕಾರರು ಆಗಮಿಸುತ್ತಿದ್ದಾರೆ. ಪಂಚಮಸಾಲಿ ಸಮಾಜಕ್ಕೆ 2 ಎ ಮೀಸಲಾತಿ ನೀಡುವಂತೆ ಒತ್ತಾಯಿಸಲು ಜನರು ಬೆಳಗಾವಿಗೆ ಆಗಮಿಸುತ್ತಿದ್ದಾರೆ.

ಕಳೆದ ಎರಡು ವರ್ಷದಿಂದ 2 ಎ ಮೀಸಲಾತಿಗೆ ನಿರಂತರ ಪ್ರತಿಭಟನೆ ನಡೆಸುತ್ತಿರುವ ಪಂಚಮಸಾಲಿ ಸಮಾಜ ಇದೀಗ ಸರ್ಕಾರದ ಮೇಲೆ ನೇರ ಒತ್ತಡ ಹಾಕಲು ಇಂದು ಎರಡನೇ ಹಂತದ ಪಾದಯಾತ್ರೆಗೆ ಸಜ್ಜಾಗಿದೆ.
ಪಾದಯಾತ್ರೆಗೆ ಪಂಚಮಸಾಲಿ ಪೀಠದ ಜಗದ್ಗುರು ಬಸವ ಜಯಮೃತ್ಯುಂಜಯ ಸ್ವಾಮೀಜಿ ಚಾಲನೆ ನೀಡಿದ್ದಾರೆ.

ಪಂಚಮಸಾಲಿ ಸಮಾಜ ಅಷ್ಟೇ ಅಲ್ಲದೆ ಇಂದು ಪ್ರತಿಭಟನೆಗೆ ಸಾಲುಸಾಲು ಸಂಘಗಳು ಸಜ್ಜಾಗಿವೆ. ಕರ್ನಾಟಕ ರೈತ ಸಂಘ, ಕರ್ನಾಟಕ ಕ್ಷತ್ರಿಯ ಮರಾಠ ಮಹಾ ಒಕ್ಕೂಟ, ವಿಲೀನ ವಂಚಿತ ವೃತ್ತಿ ಶಿಕ್ಷಣ ನೌಕರರ ಒಕ್ಕೂಟ ಇನ್ನೂ ಹತ್ತು ಹಲವು ಸಂಘಟನೆಗಳು ಪ್ರತಿಭಟನೆಗೆ ಸಜ್ಜಾಗಿವೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!